ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ ಪ್ರಸಿದ್ಧ ಯಕ್ಷಗಾನ ಕವಿ, ವಿಮರ್ಶಕ ಗಣೇಶ ಕೊಲೆಕಾಡಿ ಮುಲ್ಕಿ ಸಮೀಪದ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಪ್ರಸಿದ್ಧ ಹಿಮ್ಮೇಳ ವಾದಕರಾದ ದಿವಾಣ ಭೀಮ ಭಟ್ಟರಲ್ಲಿ ಭಾಗವತಿಕೆ ಮತ್ತು ಮದ್ದಳೆ ವಾದನವನ್ನು, ಹಾಗೂ ಛಂದಸ್ಸನ್ನು ಡಾ.ಶಿಮಂತೂರು ನಾರಾಯಣ ಶೆಟ್ಟಿ ಅವರಲ್ಲಿ ಅಭ್ಯಾಸ ಮಾಡಿದ್ದ ಗಣೇಶ ಕೊಲೆಕಾಡಿ ಸುಮಾರು 50ಕ್ಕೂ ಹೆಚ್ಚು ಪ್ರಸಂಗಗಳನ್ನು ರಚಿಸಿದ್ದಾರೆ. ಯಕ್ಷಗಾನದಲ್ಲಿ ಬಳಕೆಯಾಗಿರುವ ಛಂದಸ್ಸಿನ ವೈಶಿಷ್ಟ್ಯದ ಕುರಿತು ವಿದ್ವತ್ತೂರ್ಣವಾಗಿ ಮಾತನಾಡಬಲ್ಲವರಾಗಿದ್ದ ಗಣೇಶ್, ತಮ್ಮ ಮನೆಯಲ್ಲೇ ಆಸಕ್ತರಿಗೆ ಛಂದಸ್ಸಿನ ಸೂಕ್ಷ್ಮತೆಗಳನ್ನು ವಿವಿಧ ಮಟ್ಟುಗಳನ್ನು ತಿಳಿಸಿಕೊಟ್ಟು ಬಹುಸಂಖ್ಯೆಯಲ್ಲಿ ಭಾಗವತರನ್ನು ರೂಪಿಸಿದ ಹೆಗ್ಗಳಿಕೆ ಹೊಂದಿದ್ದಾರೆ.
ದೀರ್ಘಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಅನೇಕ ಬಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಗೊಳಗಾಗಿದ್ರು. ತಾಯಿಯೊಂದಿಗೆ ಮುಲ್ಕಿ ಬಳಿಯ ಮೈಲೊಟ್ಟು ಎಂಬಲ್ಲಿ ವಾಸವಾಗಿದ್ದ ಅವರಿಗೆ ಉಡುಪಿಯ ಯಕ್ಷಗಾನ ಕಲಾರಂಗ 2014ರಲ್ಲಿ ಮನೆಯೊಂದನ್ನು ನಿರ್ಮಿಸಿಕೊಟ್ಟಿತ್ತು. ಯಕ್ಷಗಾನ ಕಲಾರಂಗ ಅವರ ನಿರ್ದೇಶನದಲ್ಲಿ ಭಾಗವತಿಕೆಯ ಕಮ್ಮಟವನ್ನು ಸಹ ಆಯೋಜಿಸಿತ್ತು.
ಗಣೇಶ ಕೊಲೆಕಾಡಿ ಅವರಿಗೆ ಯಕ್ಷಗಾನ ಕಲಾರಂಗ ಕನಕಾ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ನೀಡಿ ಗೌರವಿಸಿತ್ತು. ಗಣೇಶ ಕೊಲೆಕಾಡಿ ಅವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಳಿ ಕಡೆಕಾರ್ ಸಂತಾಪ ಸೂಚಿಸಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…