ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಬೃಹತ್ ವಿಶ್ವ ಗೀತೋತ್ಸವದ ಉದ್ಘಾಟನಾ ಸಮಾರಂಭ ನಡೆದಿದೆ.
ಪುತ್ತಿಗೆ ಪರ್ಯಾಯ ಶ್ರೀ ಮಠದ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮಕ್ಕೆ ಶ್ರೀ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಚಾಲನೆ ನೀಡಿದ್ದಾರೆ. ಬಳಿಕ ಆಶೀರ್ವಚನ ನೀಡಿದ ಅವರು ಇಡೀ ಜಗತ್ತಿಗೆ ಕರ್ತವ್ಯ ಪ್ರಜ್ಞೆಯನ್ನು ಭಗವದ್ಗೀತೆ ಬೋಧಿಸಿದೆ. ಅದು ನಮ್ಮ ಜೊತೆಗಿದ್ದಾಗ ನಮ್ಮ ಕಷ್ಟಗಳು ದೂರವಾಗುತ್ತವೆ ಎಂದಿದ್ದಾರೆ. ಸಾಗರದಾಚೆಯ ದೇಶಗಳಲ್ಲಿ ಗೀತಾ ಪ್ರಸಾರ ಮಾಡಿರುವ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಆಚಾರ್ಯ ಮಧ್ವರು ಉಪದೇಶಿಸಿದ ಕಾರ್ಯ ಮಾಡುತ್ತಿದ್ದಾರೆ ಎಂದು ಪುತ್ತಿಗೆ ಶ್ರೀಗಳ ಕಾರ್ಯವನ್ನು ಕೊಂಡಾಡಿದ್ದಾರೆ.
ಪರ್ಯಾಯ ಪುತ್ತಿಗೆ ಮಠದ ಹಿರಿಯ ಯತಿ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಆಶೀರ್ವಚನ ನೀಡಿ ಭಗವದ್ಗೀತೆ ವಿಶ್ವತೋಮುಖಿ ಎಂದ್ರು. ಕೃಷ್ಣ ಜೀವನವನ್ನು ಹೇಗೆ ಎದುರಿಸಬೇಕು ಎಂಬ ಸಂದೇಶವನ್ನು ಭಗವದ್ಗೀತೆಯಲ್ಲಿ ನೀಡಿದ್ದಾನೆ ಎಂದವರು ಅಭಿಪ್ರಾಯಪಟ್ಟಿದ್ದಾರೆ. ಸಮಾರಂಭದಲ್ಲಿ ದಾನಿ ಹಾಗು ಉದ್ಯಮಿ ಡಾ. ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಇನ್ನೂ ಈ ಸಂದರ್ಭದಲ್ಲಿ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶೀಂದ್ರ ತೀರ್ಥ ಸ್ವಾಮೀಜಿ ಹೇರಂಭಾ ಇಂಡಸ್ಟ್ರೀಸ್ ಹಾಗು ಕೆಮಿನೋ ಫಾರ್ಮಾದ ಚೇರ್ಮನ್ ಡಾ. ಕನ್ಯಾನ ಸದಾಶಿವ ಶೆಟ್ಟಿ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…