ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಡ್ರಗ್ ಪೆಡ್ಡಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರ ಬಂಧನ!

ಉಳ್ಳಾಲದ ಕೋಟೆಕಾರು ಗ್ರಾಮದ ಬಗಂಬಿಲ ಗ್ರೌಂಡ್ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ಡ್ರಗ್ ಪೆಡ್ಡಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಿಂದ 59,300. ರೂ. ಬೆಲೆಬಾಳುವ 1.511 ಕೆಜಿ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 2 ತೂಕ ಮಾಪಕ, 2 ಮೊಬೈಲ್, 1 ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಾಸಗಿ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಆಗಿರುವ ಮಹಾರಾಷ್ಟ್ರದ ಧುಲೆ ನಿವಾಸಿ ಮೊಹಮ್ಮದ್ ನಿಗಾರೀಸ್ ವಿಲಾಸಿ ಜೀವನಕ್ಕಾಗಿ ತನ್ನ ಊರಿನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದನು. ಇನ್ನೊಂದು ಪ್ರಕರಣದಲ್ಲಿ ನಾಟೆಕಲ್ ಉರುಮಣೆ ನಿವಾಸಿ ಅಬ್ದುಲ್ ಶಕೀಬ್ ಯಾನೆ ಶಾಕಿ ಮತ್ತು ಪೆರ್ಮನ್ನೂರು ಗಂಡಿ ನಿವಾಸಿ ಸಬೀರ್ ಅಹಮ್ಮದ್ ಎಂಬವರನ್ನು ಬಂಧಿಸಲಾಗಿದೆ. ಅಬ್ದುಲ್ ಶಕೀಬ್ ಹಾಗೂ ಸಬೀರ್ ಅಹಮ್ಮದ್, ಡ್ರೈವರ್ ಮತ್ತು ಪೈಂಟರ್ ಆಗಿದ್ದು, ಅವರು ಸ್ನೇಹಿತರಾಗಿದ್ದರು. ಶಕೀಬನು ಬಿ.ಸಿ.ರೋಡ್‌ನ ಫ್ಯಾಬೀನ್ ಎಂಬಾತನಿಂದ ಗಾಂಜಾ ಪಡೆದುಕೊಂಡು ಮಾರಾಟ ಮಾಡುತ್ತಿರುವಾಗ ಗಂಡಿ ಪ್ರದೇಶದಿಂದ ಬಂಧಿಸಲಾಗಿದೆ. 420 ಗ್ರಾಂ ಗಾಂಜಾ, 6,000 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಉಳ್ಳಾಲ ಠಾಣಾಧಿಕಾರಿ ವಿರೂಪಾಕ್ಷ ಸ್ವಾಮಿ ನಿರ್ದೇಶನದಂತೆ ಎಸ್‌ಐ ಸಿದ್ದಪ್ಪ ನರನೂರ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!