ಉಳ್ಳಾಲದ ಕೋಟೆಕಾರು ಗ್ರಾಮದ ಬಗಂಬಿಲ ಗ್ರೌಂಡ್ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ಡ್ರಗ್ ಪೆಡ್ಡಿಂಗ್ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ 59,300. ರೂ. ಬೆಲೆಬಾಳುವ 1.511 ಕೆಜಿ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 2 ತೂಕ ಮಾಪಕ, 2 ಮೊಬೈಲ್, 1 ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಾಸಗಿ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಆಗಿರುವ ಮಹಾರಾಷ್ಟ್ರದ ಧುಲೆ ನಿವಾಸಿ ಮೊಹಮ್ಮದ್ ನಿಗಾರೀಸ್ ವಿಲಾಸಿ ಜೀವನಕ್ಕಾಗಿ ತನ್ನ ಊರಿನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದನು. ಇನ್ನೊಂದು ಪ್ರಕರಣದಲ್ಲಿ ನಾಟೆಕಲ್ ಉರುಮಣೆ ನಿವಾಸಿ ಅಬ್ದುಲ್ ಶಕೀಬ್ ಯಾನೆ ಶಾಕಿ ಮತ್ತು ಪೆರ್ಮನ್ನೂರು ಗಂಡಿ ನಿವಾಸಿ ಸಬೀರ್ ಅಹಮ್ಮದ್ ಎಂಬವರನ್ನು ಬಂಧಿಸಲಾಗಿದೆ. ಅಬ್ದುಲ್ ಶಕೀಬ್ ಹಾಗೂ ಸಬೀರ್ ಅಹಮ್ಮದ್, ಡ್ರೈವರ್ ಮತ್ತು ಪೈಂಟರ್ ಆಗಿದ್ದು, ಅವರು ಸ್ನೇಹಿತರಾಗಿದ್ದರು. ಶಕೀಬನು ಬಿ.ಸಿ.ರೋಡ್ನ ಫ್ಯಾಬೀನ್ ಎಂಬಾತನಿಂದ ಗಾಂಜಾ ಪಡೆದುಕೊಂಡು ಮಾರಾಟ ಮಾಡುತ್ತಿರುವಾಗ ಗಂಡಿ ಪ್ರದೇಶದಿಂದ ಬಂಧಿಸಲಾಗಿದೆ. 420 ಗ್ರಾಂ ಗಾಂಜಾ, 6,000 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಉಳ್ಳಾಲ ಠಾಣಾಧಿಕಾರಿ ವಿರೂಪಾಕ್ಷ ಸ್ವಾಮಿ ನಿರ್ದೇಶನದಂತೆ ಎಸ್ಐ ಸಿದ್ದಪ್ಪ ನರನೂರ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…