ಉಳ್ಳಾಲದ ಕೋಟೆಕಾರು ಗ್ರಾಮದ ಬಗಂಬಿಲ ಗ್ರೌಂಡ್ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ಡ್ರಗ್ ಪೆಡ್ಡಿಂಗ್ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ 59,300. ರೂ. ಬೆಲೆಬಾಳುವ 1.511 ಕೆಜಿ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 2 ತೂಕ ಮಾಪಕ, 2 ಮೊಬೈಲ್, 1 ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಾಸಗಿ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಆಗಿರುವ ಮಹಾರಾಷ್ಟ್ರದ ಧುಲೆ ನಿವಾಸಿ ಮೊಹಮ್ಮದ್ ನಿಗಾರೀಸ್ ವಿಲಾಸಿ ಜೀವನಕ್ಕಾಗಿ ತನ್ನ ಊರಿನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದನು. ಇನ್ನೊಂದು ಪ್ರಕರಣದಲ್ಲಿ ನಾಟೆಕಲ್ ಉರುಮಣೆ ನಿವಾಸಿ ಅಬ್ದುಲ್ ಶಕೀಬ್ ಯಾನೆ ಶಾಕಿ ಮತ್ತು ಪೆರ್ಮನ್ನೂರು ಗಂಡಿ ನಿವಾಸಿ ಸಬೀರ್ ಅಹಮ್ಮದ್ ಎಂಬವರನ್ನು ಬಂಧಿಸಲಾಗಿದೆ. ಅಬ್ದುಲ್ ಶಕೀಬ್ ಹಾಗೂ ಸಬೀರ್ ಅಹಮ್ಮದ್, ಡ್ರೈವರ್ ಮತ್ತು ಪೈಂಟರ್ ಆಗಿದ್ದು, ಅವರು ಸ್ನೇಹಿತರಾಗಿದ್ದರು. ಶಕೀಬನು ಬಿ.ಸಿ.ರೋಡ್ನ ಫ್ಯಾಬೀನ್ ಎಂಬಾತನಿಂದ ಗಾಂಜಾ ಪಡೆದುಕೊಂಡು ಮಾರಾಟ ಮಾಡುತ್ತಿರುವಾಗ ಗಂಡಿ ಪ್ರದೇಶದಿಂದ ಬಂಧಿಸಲಾಗಿದೆ. 420 ಗ್ರಾಂ ಗಾಂಜಾ, 6,000 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಉಳ್ಳಾಲ ಠಾಣಾಧಿಕಾರಿ ವಿರೂಪಾಕ್ಷ ಸ್ವಾಮಿ ನಿರ್ದೇಶನದಂತೆ ಎಸ್ಐ ಸಿದ್ದಪ್ಪ ನರನೂರ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…