ಪರ್ಕಳ ಪೇಟೆ ಬಳಿ ಕುಸಿದುಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮಂಗಳೂರು ಬಡಗಾಯಿಪದವು ನಿವಾಸಿ ದಾಮೋದರ ಗೌಡ ಎಂದು ಗುರುತಿಸಲಾಗಿದೆ.

ಕುಸಿದುಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ದಾಮೋದರ ಅವರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಅಂಬುಲೆನ್ಸ್ನಲ್ಲಿ ಸಾಗಿಸಿದ್ದು, ಅಲ್ಲಿ ಪರಿಕ್ಷಿಸಿದ ವೈದ್ಯರು ಅದಾಗಲೇ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ. ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ವಾರಸುದಾರರು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ಅಥವಾ ಮಣಿಪಾಲ ಪೋಲಿಸ್ ಠಾಣೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.



