ಪರಿಸರ ಮಾತೆ, ವೃಕ್ಷಮಾತೆ ಎಂದು ಕರೆಯಲ್ಪಡುವ ಸಾಲುಮರ ತಿಮ್ಮಕ್ಕ(114) ಇಂದು ವಿಧಿವಶರಾಗಿದ್ದಾರೆ.
ಪದ್ಮಶ್ರೀ ಪುರಸ್ಕೃತೆ ತಿಮ್ಮಕ್ಕ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ತೀವ್ರ ಉಸಿರಾಟದ ಕಾಯಿಲೆಯಿಂದ ಬಳಲುತ್ತಿದ್ದ 114 ವರ್ಷ ವಯಸ್ಸಿನ ಸಾಲು ಮರದ ತಿಮ್ಮಕ್ಕ ಕಳೆದ ಕೆಲವು ದಿನಗಳ ಹಿಂದೆ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು 12ಗಂಟೆಗೆ ವಿಧಿವಶರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ ಅವರು ವೃಕ್ಷಮಾತೆ ಎಂದೇ ಜನ ಜನಿತರಾದವರು. ಹುಲಿಕಲ್ ಗ್ರಾಮದ ಚಿಕ್ಕಯ್ಯರನ್ನು ವಿವಾಹವಾಗಿದ್ದ ತಿಮ್ಮಕ್ಕ ಅವರಿಗೆ ಮಕ್ಕಳಿರಲಿಲ್ಲ. ಹೀಗಾಗಿ ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ್ದರು. ಹೀಗಾಗಿ ಅವರು ಕೊನೆಗೆ ಸಾಲು ಮರದ ತಿಮ್ಮಕ್ಕ ಎಂದೇ ಪ್ರಸಿದ್ಧರಾದರು. ಇವರ ಈ ಪರಿಸರ ಪ್ರೇಮವನ್ನು ಗುರುತಿಸಿ 2019ರಲ್ಲಿ ಪದ್ಮಶ್ರೀ ಲಭಿಸಿತ್ತು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…