ಪರಿಸರ ಮಾತೆ, ವೃಕ್ಷಮಾತೆ ಎಂದು ಕರೆಯಲ್ಪಡುವ ಸಾಲುಮರ ತಿಮ್ಮಕ್ಕ(114) ಇಂದು ವಿಧಿವಶರಾಗಿದ್ದಾರೆ.
ಪದ್ಮಶ್ರೀ ಪುರಸ್ಕೃತೆ ತಿಮ್ಮಕ್ಕ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ತೀವ್ರ ಉಸಿರಾಟದ ಕಾಯಿಲೆಯಿಂದ ಬಳಲುತ್ತಿದ್ದ 114 ವರ್ಷ ವಯಸ್ಸಿನ ಸಾಲು ಮರದ ತಿಮ್ಮಕ್ಕ ಕಳೆದ ಕೆಲವು ದಿನಗಳ ಹಿಂದೆ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು 12ಗಂಟೆಗೆ ವಿಧಿವಶರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ ಅವರು ವೃಕ್ಷಮಾತೆ ಎಂದೇ ಜನ ಜನಿತರಾದವರು. ಹುಲಿಕಲ್ ಗ್ರಾಮದ ಚಿಕ್ಕಯ್ಯರನ್ನು ವಿವಾಹವಾಗಿದ್ದ ತಿಮ್ಮಕ್ಕ ಅವರಿಗೆ ಮಕ್ಕಳಿರಲಿಲ್ಲ. ಹೀಗಾಗಿ ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ್ದರು. ಹೀಗಾಗಿ ಅವರು ಕೊನೆಗೆ ಸಾಲು ಮರದ ತಿಮ್ಮಕ್ಕ ಎಂದೇ ಪ್ರಸಿದ್ಧರಾದರು. ಇವರ ಈ ಪರಿಸರ ಪ್ರೇಮವನ್ನು ಗುರುತಿಸಿ 2019ರಲ್ಲಿ ಪದ್ಮಶ್ರೀ ಲಭಿಸಿತ್ತು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…