ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಟ್ಯಾಂಕರ್ ಲಾರಿಗಳ ನಡುವೆ ಸಿಲುಕಿಕೊಂಡ ರಿಕ್ಷಾ; ಮೂವರ ಸಾವು..!

ಪಣಂಬೂರು ಬಳಿ ಎರಡು ಟ್ಯಾಂಕರ್ ಲಾರಿಗಳ ನಡುವೆ ರಿಕ್ಷಾ ಸಿಲುಕಿ ಮೂವರು ಮೃತಪಟ್ಟ ದಾರುಣ ಘಟನೆ ನಡೆದಿದೆ.

ಪಣಂಬೂರು ಸಿಗ್ನಲ್‌ನಲ್ಲಿ ಬಳಿ ನಿಂತಿದ್ದ ವಾಹನಗಳಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನಪ್ಪಿದ್ದಾರೆ. ಪಣಂಬೂರು ಸಿಗ್ನಲ್ ಬಳಿ ವಾಹನಗಳು ಸಿಗ್ನಲ್‌ಗಾಗಿ ಕಾಯುತ್ತಿದ್ದ ವೇಳೆ ವೇಗವಾಗಿ ಬಂದ ಟ್ಯಾಂಕರ್ ಹಿಂದಿನಿಂದ ಆಟೊ ರಿಕ್ಷಾ ಮತ್ತು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಸಿಗ್ನಲ್ ನಲ್ಲಿ ನಿಂತಿದ್ದ ಟ್ಯಾಂಕರ್ ವೊಂದರ ಹಿಂಭಾಗದಲ್ಲಿ ಕಾರು ಮತ್ತು ಆಟೊ ರಿಕ್ಷಾ ನಿಂತಿತ್ತು.

ಈ ವೇಳೆ ಹಿಂದಿನಿಂದ ಬಂದ ಇನ್ನೊಂದು ಟ್ಯಾಂಕರ್ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಅದರ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಆಟೊ ರಿಕ್ಷಾ ಎರಡು ಟ್ಯಾಂಕರ್ ಗಳ ಮಧ್ಯೆ ಸಿಲುಕಿ ಅಪ್ಪಚ್ಚಿಯಾಗಿದೆ. ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಮತ್ತು ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!