ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಅಕ್ರಮ ಗೋಹತ್ಯೆ ಪ್ರಕರಣ; ಸುಮಾರು 150 ಕೆಜಿ ದನದ ಮಾಂಸ ವಶ…!

ಬಂಟ್ವಾಳ ತಾಲೂಕು ಅರಳ ಗ್ರಾಮದ ನಿವಾಸಿ ಮೈಯದಿ ಎಂಬವರು, ಅವರ ಮನೆಯ ಆವರಣದಲ್ಲಿರುವ ಶೆಡ್ ಬಳಿ ಜಾನುವಾರುಗಳನ್ನು ಕಟ್ಟಿಕೊಂಡು, ವಧೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪಿ.ಎಸ್.ಐ ಮತ್ತು ಸಿಬ್ಬಂದಿಯವರು ಸ್ಥಳಕ್ಕೆ ದಾಳಿ ಮಾಡಿದ್ದಾರೆ.

ಮನೆಯ ಬಳಿಯ ಶೆಡ್‌ನಲ್ಲಿ ಮೂರು ಜನರು, ದನವನ್ನು ವಧೆ ಮಾಡಿ ಮಾಂಸ ಮಾಡುತ್ತಿದ್ದು, ದಾಳಿ ಸಮಯ ಇಬ್ಬರು ಪರಾರಿಯಾಗಿರುತ್ತಾರೆ. ಒರ್ವನನ್ನು ವಶಕ್ಕೆ ಪಡೆದು ವಿಚಾರಿಸಲಾಗಿ ಮೈಯದಿ ಎಂಬಾತನಾಗಿದ್ದು, ಶೆಡ್‌ನಲ್ಲಿದ್ದ ಮೂರು ಹಸುಗಳನ್ನು ಮತ್ತು ಒಂದು ಕರುವನ್ನು ರಕ್ಷಿಸಲಾಗಿದೆ. ವಧೆ ಮಾಡಿದ ಸುಮಾರು 150 ಕೆಜಿ ದನದ ಮಾಂಸವನ್ನು ವಶ ಪಡಿಸಿಕೊಂಡಿದ್ದಾರೆ. ದಸ್ತಗಿರಿಯಾದ ಆರೋಪಿ ಮೈಯದಿ ಎಂಬಾತನನ್ನು ಮಾನ್ಯ ನ್ಯಾಯಾಲಯ ಹಾಜರುಪಡಿಸಲಾಗಿದ್ದು, ತಲೆಮರೆಸಿಕೊಂಡ ಆರೋಪಿಗಳ ಪತ್ತೆಕಾರ್ಯ ಪ್ರಗತಿಯಲ್ಲಿದೆ.

ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೇ ಮನೆಯ ಆವರಣದ ಶೆಡ್ ನಲ್ಲಿ ಕಸಾಯಿಖಾನೆಯನ್ನು ನಿರ್ಮಾಣ ಮಾಡಿಕೊಂಡು ಮನೆಯಿಂದಲೇ ವಿದ್ಯುತ್ ಸಂಪರ್ಕ ಪಡೆದು ಜಾನುವಾರುಗಳ ವಧೆ ನಡೆಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ, ಈತನ ಮನೆ ಹಾಗೂ ಶೇಡ್‌ನ ಆವರಣವನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಜಪ್ತಿ ಮಾಡಿ, ಮಾನ್ಯ ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿ ಮಂಗಳೂರು ಉಪವಿಭಾಗರವರಿಗೆ ಮುಟ್ಟುಗೋಲು ಮಾಡುವ ಬಗ್ಗೆ ವರದಿಯನ್ನು ಸಲ್ಲಿಸಲಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!