ಬಂಟ್ವಾಳ ತಾಲೂಕು ಅರಳ ಗ್ರಾಮದ ನಿವಾಸಿ ಮೈಯದಿ ಎಂಬವರು, ಅವರ ಮನೆಯ ಆವರಣದಲ್ಲಿರುವ ಶೆಡ್ ಬಳಿ ಜಾನುವಾರುಗಳನ್ನು ಕಟ್ಟಿಕೊಂಡು, ವಧೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪಿ.ಎಸ್.ಐ ಮತ್ತು ಸಿಬ್ಬಂದಿಯವರು ಸ್ಥಳಕ್ಕೆ ದಾಳಿ ಮಾಡಿದ್ದಾರೆ.
ಮನೆಯ ಬಳಿಯ ಶೆಡ್ನಲ್ಲಿ ಮೂರು ಜನರು, ದನವನ್ನು ವಧೆ ಮಾಡಿ ಮಾಂಸ ಮಾಡುತ್ತಿದ್ದು, ದಾಳಿ ಸಮಯ ಇಬ್ಬರು ಪರಾರಿಯಾಗಿರುತ್ತಾರೆ. ಒರ್ವನನ್ನು ವಶಕ್ಕೆ ಪಡೆದು ವಿಚಾರಿಸಲಾಗಿ ಮೈಯದಿ ಎಂಬಾತನಾಗಿದ್ದು, ಶೆಡ್ನಲ್ಲಿದ್ದ ಮೂರು ಹಸುಗಳನ್ನು ಮತ್ತು ಒಂದು ಕರುವನ್ನು ರಕ್ಷಿಸಲಾಗಿದೆ. ವಧೆ ಮಾಡಿದ ಸುಮಾರು 150 ಕೆಜಿ ದನದ ಮಾಂಸವನ್ನು ವಶ ಪಡಿಸಿಕೊಂಡಿದ್ದಾರೆ. ದಸ್ತಗಿರಿಯಾದ ಆರೋಪಿ ಮೈಯದಿ ಎಂಬಾತನನ್ನು ಮಾನ್ಯ ನ್ಯಾಯಾಲಯ ಹಾಜರುಪಡಿಸಲಾಗಿದ್ದು, ತಲೆಮರೆಸಿಕೊಂಡ ಆರೋಪಿಗಳ ಪತ್ತೆಕಾರ್ಯ ಪ್ರಗತಿಯಲ್ಲಿದೆ.
ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೇ ಮನೆಯ ಆವರಣದ ಶೆಡ್ ನಲ್ಲಿ ಕಸಾಯಿಖಾನೆಯನ್ನು ನಿರ್ಮಾಣ ಮಾಡಿಕೊಂಡು ಮನೆಯಿಂದಲೇ ವಿದ್ಯುತ್ ಸಂಪರ್ಕ ಪಡೆದು ಜಾನುವಾರುಗಳ ವಧೆ ನಡೆಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ, ಈತನ ಮನೆ ಹಾಗೂ ಶೇಡ್ನ ಆವರಣವನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಜಪ್ತಿ ಮಾಡಿ, ಮಾನ್ಯ ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿ ಮಂಗಳೂರು ಉಪವಿಭಾಗರವರಿಗೆ ಮುಟ್ಟುಗೋಲು ಮಾಡುವ ಬಗ್ಗೆ ವರದಿಯನ್ನು ಸಲ್ಲಿಸಲಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…