ಸರಕಾರಿ ಪ್ರೌಢ ಶಾಲೆ ಸುಜೀರು ಬಂಟ್ವಾಳ ತಾಲೂಕು ಸೇವಾ ನಿವೃತ್ತಿಗೊಂಡಿರುವ ಹಿಲ್ಡಾ ಪಿರೇರರವರ ಬೀಳ್ಳೊಡುಗೆ ಸಭಾರಂಭ ಶಾಲೆಯ ಸಭಾಂಗಣದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಉಮ್ಮರ್ ಫಾರೂಕ್ ಅವರ ಅಧ್ಯಕ್ಷತೆಯಲ್ಲಿ ನಡೆದಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಉಮ್ಮರ್ ಫಾರೂಕ್ ಇವರು ಇತರ ಎಲ್ಲಾ ಇಲಾಖೆಗಳಿಗಿಂತ ಶಿಕ್ಷಣ ಇಲಾಖೆಯಲ್ಲಿನ ಶಿಕ್ಷಕ ವೃತ್ತಿ ಶ್ರೇಷ್ಠವಾದ ವೃತ್ತಿಯಾಗಿದ್ದು, ಮಕ್ಕಳ ಭವಿಷ್ಯವನ್ನು ರೂಪುಗೊಳಿಸಿ ಉತ್ತಮ ಪ್ರಜೆಗಳನ್ನಾಗಿ ಮಾಡುವ ಮಹತ್ತರವಾದ ಪಾತ್ರವನ್ನು ಶಿಕ್ಷಕರು ಮಾಡುತ್ತಿದ್ದಾರೆ. ಅಂತಹ ಉತ್ತಮ ಶಿಕ್ಷಕರ ಸಾಲಿನಲ್ಲಿ ಹಿಲ್ಡಾ ಪಿರೇರ ಅವರು ಒಬ್ಬರಾಗಿದ್ದು, ಇವರ ಮುಂದಿನ ನಿವೃತ್ತ ಜೀವನವು ಸುಖಕರವಾಗಿರಲಿ ಎಂದು ಹಾರೈಸಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ರುಕ್ಷಾನ ಬಾನು, ಪುದು ಪಂಚಾಯತ್ ಸದಸ್ಯರುಗಳಾದ ಮುಮ್ತಾಝ್, ರೆಹನಾ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಅಬ್ದುಲ್ ಲತೀಫ್, ಹಿದಾಯಿತುಲ್ಲಾ, ರಂಝೀನಾ, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.



