ಜನ ಮನದ ನಾಡಿ ಮಿಡಿತ

Advertisement

ಬೆಳ್ತಂಗಡಿ: ನಿಯಂತ್ರಣ ತಪ್ಪಿ ಆಟೋ ಪಲ್ಟಿ; ಓರ್ವ ಬಾಲಕ ಸಾವು; ಹಲವಾರು ಮಂದಿಗೆ ಗಾಯ

ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ನಾವೂರಿನ ಶಶಿ ಎಂಬವರ ಆಟೋದಲ್ಲಿದ್ದ ಐದು ಮಂದಿಗೆ ಗಾಯವಾದ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕುತ್ರೋಟ್ಟು-ಟಿ.ಬಿ.ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನಡೆದಿದೆ.

ಆಟೋದಲ್ಲಿದ್ದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಪುತ್ರ ತನ್ವಿತ್ ಮೃತಪಟ್ಟ ಬಾಲಕನಾಗಿದ್ದಾನೆ. ಆಟೋ ಪಲ್ಟಿಯಾದ ರಭಸಕ್ಕೆ ಗಾಯಗೊಂಡಿದ್ದ ತನ್ವಿತ್ ನನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಆಟೋದಲ್ಲಿದ್ದ ಐದು ಮಂದಿಗೆ ಗಾಯವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ಆಟೋದಲ್ಲಿ ಹೋಗುತ್ತಿದ್ದಾಗ ನಡೆದ ಘಟನೆಯಾಗಿದ್ದು, ಬೆಳ್ತಂಗಡಿ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!