ಇತಿಹಾಸ ಪ್ರಸಿದ್ಧ ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಧಾನದಲ್ಲಿ ಲಕ್ಷದೀಪೋತ್ಸವ ಮತ್ತು ರಂಗಪೂಜೆಯ ಬಗ್ಗೆ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೀರೇಂದ್ರ ಬಿ.ಅಮೀನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಈಶ್ವರ ಸನ್ನಿದಿಯಲ್ಲಿ ತುಲಾಭಾರ ಸೇವೆ, ರಂಗಪೂಜೆ, ಬಲ್ಲೋಡಿ ಮಾಗಣೆ ಗುತ್ತಿಯಿಂದ ಕೊಡಮಣಿತ್ತಾಯ ದೈವದ ಭಂಡಾರ ಆಗಮನ, ಲಕ್ಷದೀಪೋತ್ಸವದ ನಿಮಿತ್ತ ಕಾರಿಂಜೇಶ್ವರ ದೇವರು ಪಾರ್ವತಿ ಸನ್ನಿದಿಗೆ ಆಗಮನ. ಕೊಡಮಣಿತ್ತಾಯ ದೈವದ ನೇಮ, ಪಾರ್ವತಿ ಪರಮೇಶ್ವರ ದೇವರ ಉತ್ಸವ ನಡೆಯಲಿದೆ. ನಿತ್ಯ ನರ್ತನಂ ನೃತ್ಯ ಕಾರ್ಯಕ್ರಮ ನಡೆಯಲಿದೆ.



