ಜಿಲ್ಲಾಧಿಕಾರಿ ದರ್ಶನ್ ಅವರು ಬಂಟ್ವಾಳಕ್ಕೆ ಬೇಟಿ ನೀಡಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ನಡೆದಂತಹ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಯ ಕಾರ್ಯದಲ್ಲಿ ಕರ್ತವ್ಯ ನಿರ್ವಹಿಸಿದ ಕೆಲವು ಶಿಕ್ಷಕರಿಗೆ ಗಣತಿ ಕಾರ್ಯದ ಸಮಯದಲ್ಲಿ ಮನೆ- ಮನೆ ಭೇಟಿ ನೀಡುವಾಗ ಹೆಜ್ಜೆನು ಹುಳ, ನಾಯಿಗಳು ಕಚ್ಚಿ ಹಾಗೂ ರಸ್ತೆಯ ಅಪಘಾತಗಳಿಂದ ಅನಾರೋಗ್ಯಕ್ಕೆ ತುತ್ತಾದಂತಹ ಶಿಕ್ಷಕರನ್ನು ಭೇಟಿ ಮಾಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.
ಅಂತಹ ಕಷ್ಟದ ಸಮಯದಲ್ಲೂ ಸಹ ಧೃತಿಗೆಡದೆ ಯಶಸ್ವಿಯಾಗಿ ಗಣತಿ ಕಾರ್ಯವನ್ನು ಪೂರ್ಣಗೊಳಿಸಿದ ಸರ್ಕಾರಿ ಪ್ರೌಢ ಶಾಲೆ ಸಜೀಪ ಮೂಡ, ಗ್ರಾಮದ ಶಾಲಾ ಶಿಕ್ಷಕ ವೆಂಕಟರಮಣ ಆಚಾರ್ ಹಾಗೂ ಕಾವಳಮೂಡೂರು ಗ್ರಾಮದ ಕಾವಳಕಟ್ಟೆ ಎಂಬಲ್ಲಿನ ಶಾಲಾ ಶಿಕ್ಷಕಿ ಸುರೇಖಾ ಇವರಿಗೂ ಜಿಲ್ಲಾಡಳಿತದ ವತಿಯಿಂದ ಕೃತಜ್ಞತೆಯನ್ನು ಸಲ್ಲಿಸಿರುತ್ತಾರೆ.
ಜೊತೆಗೆ ಕಾವಳ ಮೂಡೂರು ಗ್ರಾಮದ ಪ್ರೌಢಶಾಲಾ ವಿದ್ಯಾರ್ಥಿಗಳ ಕೊಠಡಿಗೆ ತೆರಳಿ ಅವರಿಗೆ ದಿನನಿತ್ಯ ನೀಡುತ್ತಿರುವ ಉಟೋಪಚಾರ ಪೌಷ್ಟಿಕತೆಯಿಂದ ಕೂಡಿದೆಯೇ ಎಂದು ವಿಚಾರಿಸುವುದರ, ಜೊತೆಗೆ ಶಾಲಾ ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡುತ್ತಿದ್ದಾರಾ ಎಂಬ ಬಗ್ಗೆ ಹಾಗೂ ಪ್ರತಿಯೊಂದು ಶಾಲಾ ವಿದ್ಯಾರ್ಥಿಯನ್ನು ತಾವು ಭವಿಷ್ಯದಲ್ಲಿ ಏನಾಗಲು ಬಯಸಿದ್ದೀರಿ ಎಂದು ಎಲ್ಲರನ್ನು ಪ್ರೀತಿಯಿಂದ ವಿಚಾರಿಸಿದ್ದಾರೆ.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಶ್ರೀ ಮಂಜುನಾಥನ್ ಎಂ ಜಿ, ಶಿಕ್ಷಣ ಸಂಯೋಜಕರಾದ ಶ್ರೀಮತಿ ಪ್ರತಿಮಾ ವೈ ವಿ ಹಾಗೂ ಕಂದಾಯ ನಿರೀಕ್ಷಕರುಗಳಾದ ಜೆ ಜನಾರ್ಧನ್, ವಿಜಯ್ ಆರ್, ರವಿ ಎನ್ ಇವರು ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…