ಜಿಲ್ಲಾಧಿಕಾರಿ ದರ್ಶನ್ ಅವರು ಬಂಟ್ವಾಳಕ್ಕೆ ಬೇಟಿ ನೀಡಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ನಡೆದಂತಹ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಯ ಕಾರ್ಯದಲ್ಲಿ ಕರ್ತವ್ಯ ನಿರ್ವಹಿಸಿದ ಕೆಲವು ಶಿಕ್ಷಕರಿಗೆ ಗಣತಿ ಕಾರ್ಯದ ಸಮಯದಲ್ಲಿ ಮನೆ- ಮನೆ ಭೇಟಿ ನೀಡುವಾಗ ಹೆಜ್ಜೆನು ಹುಳ, ನಾಯಿಗಳು ಕಚ್ಚಿ ಹಾಗೂ ರಸ್ತೆಯ ಅಪಘಾತಗಳಿಂದ ಅನಾರೋಗ್ಯಕ್ಕೆ ತುತ್ತಾದಂತಹ ಶಿಕ್ಷಕರನ್ನು ಭೇಟಿ ಮಾಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.
ಅಂತಹ ಕಷ್ಟದ ಸಮಯದಲ್ಲೂ ಸಹ ಧೃತಿಗೆಡದೆ ಯಶಸ್ವಿಯಾಗಿ ಗಣತಿ ಕಾರ್ಯವನ್ನು ಪೂರ್ಣಗೊಳಿಸಿದ ಸರ್ಕಾರಿ ಪ್ರೌಢ ಶಾಲೆ ಸಜೀಪ ಮೂಡ, ಗ್ರಾಮದ ಶಾಲಾ ಶಿಕ್ಷಕ ವೆಂಕಟರಮಣ ಆಚಾರ್ ಹಾಗೂ ಕಾವಳಮೂಡೂರು ಗ್ರಾಮದ ಕಾವಳಕಟ್ಟೆ ಎಂಬಲ್ಲಿನ ಶಾಲಾ ಶಿಕ್ಷಕಿ ಸುರೇಖಾ ಇವರಿಗೂ ಜಿಲ್ಲಾಡಳಿತದ ವತಿಯಿಂದ ಕೃತಜ್ಞತೆಯನ್ನು ಸಲ್ಲಿಸಿರುತ್ತಾರೆ.
ಜೊತೆಗೆ ಕಾವಳ ಮೂಡೂರು ಗ್ರಾಮದ ಪ್ರೌಢಶಾಲಾ ವಿದ್ಯಾರ್ಥಿಗಳ ಕೊಠಡಿಗೆ ತೆರಳಿ ಅವರಿಗೆ ದಿನನಿತ್ಯ ನೀಡುತ್ತಿರುವ ಉಟೋಪಚಾರ ಪೌಷ್ಟಿಕತೆಯಿಂದ ಕೂಡಿದೆಯೇ ಎಂದು ವಿಚಾರಿಸುವುದರ, ಜೊತೆಗೆ ಶಾಲಾ ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡುತ್ತಿದ್ದಾರಾ ಎಂಬ ಬಗ್ಗೆ ಹಾಗೂ ಪ್ರತಿಯೊಂದು ಶಾಲಾ ವಿದ್ಯಾರ್ಥಿಯನ್ನು ತಾವು ಭವಿಷ್ಯದಲ್ಲಿ ಏನಾಗಲು ಬಯಸಿದ್ದೀರಿ ಎಂದು ಎಲ್ಲರನ್ನು ಪ್ರೀತಿಯಿಂದ ವಿಚಾರಿಸಿದ್ದಾರೆ.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಶ್ರೀ ಮಂಜುನಾಥನ್ ಎಂ ಜಿ, ಶಿಕ್ಷಣ ಸಂಯೋಜಕರಾದ ಶ್ರೀಮತಿ ಪ್ರತಿಮಾ ವೈ ವಿ ಹಾಗೂ ಕಂದಾಯ ನಿರೀಕ್ಷಕರುಗಳಾದ ಜೆ ಜನಾರ್ಧನ್, ವಿಜಯ್ ಆರ್, ರವಿ ಎನ್ ಇವರು ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…