ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಕಾಮಗೌಡನಹಳ್ಳಿ ಗ್ರಾಮದ ಸೋಮಶೇಖರ್ರವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ.
ನಂತರ ಗ್ರಾಮಸ್ಥರ ಕೂಗಾಟದಿಂದ ಗಾಬರಿಗೊಂಡು ಪರಾರಿಯಾಗಿದೆ. ವಾರದ ಹಿಂದಷ್ಟೆ ಇದೆ ಗ್ರಾಮದ ರೈತರ ಎರಡು ಹಸುಗಳು ಹುಲಿಗೆ ಬಲಿಯಾಗಿದ್ದವು, ಹೀಗೆ ಒಂದರ ಮೇಲೊಂದು ಸಾಕು ಪ್ರಾಣಿಗಳ ಮೇಲೆ ದಾಳಿ ನಡೆದು ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದರೂ ಅರಣ್ಯ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಇದಕ್ಕೆ ಪರಿಹಾರ ಕಂಡುಕೊಡುವಲ್ಲಿ ವಿಫಲವಾಗಿದ್ದಾರೆ ಎಂದು ಯುವ ರೈತ ಮುಖಂಡ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ಹನಗೋಡು ಹೋಬಳಿಯ ಕಾಡಂಚಿನ ಗ್ರಾಮಗಳಾದ ಹನಗೋಡು, ಬಿ.ಆರ್ ಕಾವಲು, ಕಾಮಗೌಡನಹಳ್ಳಿ, ನೇಗತ್ತೂರು, ದೊಡ್ಡಕಟ್ಟೆ ಹೆಮ್ಮಿಗೆ ಗ್ರಾಮ ಸೇರಿದಂತೆ ಹಲವು ಗ್ರಾಮಗಳಲ್ಲಿ ಸಾಕು ಪ್ರಾಣಿಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಹುಲಿ ಹಾಗೂ ಚಿರತೆ ದಾಳಿಯಿಂದ ಬೇಸತ್ತು ತಾಲ್ಲೂಕಿನಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ರೈತರು ಎಚ್ಚರಿಸಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…