ಪುತ್ತೂರಿನ ಕೂರ್ನಡ್ಕ ಎಂಬಲ್ಲಿ ನಗರದ ಮಧ್ಯಭಾಗದ ಪ್ರಮುಖ ರಸ್ತೆಯಲ್ಲಿದ್ದ ಬೃಹತ್ ಹೊಂಡವೊಂದನ್ನು ಸ್ವತಃ ತಮ್ಮ ಖರ್ಚಿನಲ್ಲಿ ಸಾಮಗ್ರಿ ತರಿಸಿ, ತಾವೇ ಕಾಂಕ್ರೀಟ್ ಕಲಸಿ ಮುಚ್ಚುವ ಮೂಲಕ ಮಾದರಿ ಕೆಲಸ ಮಾಡಿದ್ದಾರೆ.
ಕೂರ್ನಡ್ಕದ ರಸ್ತೆ ಗುಂಡಿಯನ್ನು ಮುಚ್ಚುವಂತೆ 3 ತಿಂಗಳ ಹಿಂದೆ ದಿಢೀರಣೆ ಪ್ರತಿಭಟನೆ ಮತ್ತು ಹಲವಾರು ಬಾರಿ ಪುತ್ತೂರು ನಗರ ಸಭೆಗೆ ಹಾಗೂ ,ಸ್ಥಳೀಯ ಕೌನ್ಸಿಲರ್ ಜನಪ್ರತಿನಿದಿಗಳಿಗೆ ಮನವಿ ಕೊಟ್ಟು ಏನೂ ಪ್ರಯೋಜನವಾಗದಿದ್ದಾಗ ಕೊನೆಗೆ ಕೂರ್ನಡ್ಕದ ಸಾಮಾಜಿಕ ಕಾರ್ಯಕರ್ತರಾದ ಹಕೀಮ್ ಕೂರ್ನಡ್ಕ ಸಿರಾಜ್ ಎ. ಕೆ ಮತ್ತು ಯಹಿಯ ಕೆ ಎಚ್ ಕೂರ್ನಡ್ಕ ಕಾಂಕ್ರೀಟೀಕರಣ ಮಾಡಿ ಗುಂಡಿಯನ್ನು ಮುಚ್ಚಿದ್ದಾರೆ. ಸಾರ್ವಜನಿಕ ಹಿತದೃಷ್ಟಿಯಿಂದ ಮಾಡಿದ ಈ ಕಾರ್ಯಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಇವರು ಮಾಡಿದ ಕೆಲಸಕ್ಕೆ ಹಲವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…