ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರ ಚಿನ್ನಾಭರಣ ಎಗರಿಸಿದ ಇಬ್ಬರು ಕಳ್ಳಿಯರನ್ನು ಧರ್ಮಸ್ಥಳ ಪೊಲೀಸರು ಹುಡುಕಿ ತಂದು ಲಾಕಪ್ಗೆ ತಳ್ಳಿದ್ದಾರೆ.

ಧಾರವಾಡ ಜಿಲ್ಲೆಯ ಹುಬ್ಬಳಿ ನಗರದ ಸೆಟಲ್ಮೆಂಟ್ 2 ನೇ ಕ್ರಾಸ್ ಗಂಗಾಧರ ನಗರ ನಿವಾಸಿ ಬಿ.ಬಿ.ಜಾನ್ ಮತ್ತು ಮಗಳು ಮಸಾಭಿ ಅಲಿಯಾಸ್ ಆರತಿ ಬಂಧಿತ ಆರೋಪಿಗಳಾಗಿದ್ದಾರೆ. ದೇವಳದ ಒಳಗೆ ಆಂಧ್ರ ಪ್ರದೇಶದಿಂದ ಬಂದಿದ್ದ ಭಕ್ತಾದಿಗಳ ಬ್ಯಾಗ್ನಿಂದ ಚಿನ್ನಾಭರಣ ಕಳ್ಳತನ ಮಾಡಿ ಬಳಿಕ ಪರಾರಿಯಾಗಿದ್ದಾರೆ. ಈ ಖತಾರ್ನಾಕ್ ತಾಯಿ-ಮಗಳನ್ನು ಐದು ತಿಂಗಳ ಬಳಿಕ ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಗಾಣಿಗೇರ ತಂಡ ಯಶಸ್ವಿಯಾಗಿದೆ.



