ಕಾಸರಗೋಡಿನಲ್ಲಿ ಮಹಾಶಿಲಾ ಸಂಸ್ಕೃತಿಯ ಗುಹೆ ಪತ್ತೆಯಾಗಿದೆ, ಉತ್ಪನನದಲ್ಲಿ ಮಡಿಕೆ ಅವಶೇಷ, ಕಬ್ಬಿಣದ ಉಪಕರಣಗಳು ದೊರಕಿವೆ.
ಕುಟ್ಟಿಕೋಲ್ ಪಂಚಾಯತ್ ಬಂದಡ್ಕ ಮಣಿಮೂಲ ಪ್ರದೇಶದಲ್ಲಿ ಪುರಾತತ್ವ ಇಲಾಖೆ ನಡೆಸಿದ ಇತ್ತೀಚಿನ ಉತ್ಪನನ ಕಾರ್ಯದಲ್ಲಿ ಮಹಾಶಿಲಾ ಸಂಸ್ಕೃತಿಗೆ ಸೇರಿದ ನೂತನ ಅವಶೇಷಗಳು ಪತ್ತೆಯಾಗಿದ್ದು, ಇಲ್ಲಿ ಪುರಾತನ ಮಾನವ ವಾಸದ ಇತಿಹಾಸಕ್ಕೆ ಮತ್ತೊಂದು ದೃಢ ಸುಳಿವು ಸಿಕ್ಕಂತಾಗಿದೆ. ಕಲ್ಪತಾಯಮ ಪ್ರದೇಶದಲ್ಲಿ ನಡೆದ ಅಧ್ಯಯನದ ವೇಳೆ ಮುರಿದ ಮಡಿಕೆ ತುಂಡುಗಳು, ಕಬ್ಬಿಣದ ಉಳಿ, ಮತ್ತು ಕಬ್ಬಿಣದ ರಾಡ್ಗಳು ಪತ್ತೆಯಾಗಿವೆ. ಈ ವಸ್ತುಗಳನ್ನು ಪುರಾತತ್ವ ಇಲಾಖೆ ಸ್ವಾಧೀನಪಡಿಸಿಕೊಂಡಿದ್ದು, ತಜ್ಞರ ವೈಜ್ಞಾನಿಕ ಪರಿಶೀಲನೆಗೆ ಒಳಪಡಿಸಲಾಗುತ್ತಿದೆ. ಇದಕ್ಕೂ ಮೊದಲು, ಏಪ್ರಿಲ್ 4ರಂದು ಜಲಜೀವನ ಯೋಜನೆಗಾಗಿ ನಡೆದ ಅಗೆಯುವ ಸಂದರ್ಭದಲ್ಲಿ ಇದೇ ಪ್ರದೇಶದಲ್ಲಿ ಮಹಾಶಿಲಾ ಸಂಸ್ಕೃತಿಯ ಮಡಿಕೆಗಳು ಮತ್ತು ಮೂಳೆ ತುಣುಕುಗಳು ದೊರೆತಿದ್ದವು. ನಂತರ ಮಳೆಯಿಂದಾಗಿ ಉತ್ಪನನ ಕಾರ್ಯ ವಿಳಂಬಗೊಂಡಿದ್ದರೂ, ನವೆಂಬರ್ 15ರಂದು ಮಣ್ಣಿನ ಪದರಗಳನ್ನು ತೆರವುಗೊಳಿಸುವ ಕಾರ್ಯ ಪುನರಾರಂಭಿಸಲಾಯಿತು. ಈ ವೇಳೆ ಕಲ್ಪತಾಯಮ ಬಳಿಯ ಮಣ್ಣಿನ ಕೋಣೆಯಲ್ಲಿ ಆ ಅಮೂಲ್ಯ ಕಲ್ಲುಗಳು, ಕಬ್ಬಿಣದ ಉಪಕರಣಗಳು ಮತ್ತು ಮಡಿಕೆ ಅವಶೇಷಗಳು ಮತ್ತೆ ಪತ್ತೆಯಾದವು.
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…
ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ. ಬೆಂಜನಪದವಿನ…
ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ…