ಕಾಸರಗೋಡಿನಲ್ಲಿ ಮಹಾಶಿಲಾ ಸಂಸ್ಕೃತಿಯ ಗುಹೆ ಪತ್ತೆಯಾಗಿದೆ, ಉತ್ಪನನದಲ್ಲಿ ಮಡಿಕೆ ಅವಶೇಷ, ಕಬ್ಬಿಣದ ಉಪಕರಣಗಳು ದೊರಕಿವೆ.
ಕುಟ್ಟಿಕೋಲ್ ಪಂಚಾಯತ್ ಬಂದಡ್ಕ ಮಣಿಮೂಲ ಪ್ರದೇಶದಲ್ಲಿ ಪುರಾತತ್ವ ಇಲಾಖೆ ನಡೆಸಿದ ಇತ್ತೀಚಿನ ಉತ್ಪನನ ಕಾರ್ಯದಲ್ಲಿ ಮಹಾಶಿಲಾ ಸಂಸ್ಕೃತಿಗೆ ಸೇರಿದ ನೂತನ ಅವಶೇಷಗಳು ಪತ್ತೆಯಾಗಿದ್ದು, ಇಲ್ಲಿ ಪುರಾತನ ಮಾನವ ವಾಸದ ಇತಿಹಾಸಕ್ಕೆ ಮತ್ತೊಂದು ದೃಢ ಸುಳಿವು ಸಿಕ್ಕಂತಾಗಿದೆ. ಕಲ್ಪತಾಯಮ ಪ್ರದೇಶದಲ್ಲಿ ನಡೆದ ಅಧ್ಯಯನದ ವೇಳೆ ಮುರಿದ ಮಡಿಕೆ ತುಂಡುಗಳು, ಕಬ್ಬಿಣದ ಉಳಿ, ಮತ್ತು ಕಬ್ಬಿಣದ ರಾಡ್ಗಳು ಪತ್ತೆಯಾಗಿವೆ. ಈ ವಸ್ತುಗಳನ್ನು ಪುರಾತತ್ವ ಇಲಾಖೆ ಸ್ವಾಧೀನಪಡಿಸಿಕೊಂಡಿದ್ದು, ತಜ್ಞರ ವೈಜ್ಞಾನಿಕ ಪರಿಶೀಲನೆಗೆ ಒಳಪಡಿಸಲಾಗುತ್ತಿದೆ. ಇದಕ್ಕೂ ಮೊದಲು, ಏಪ್ರಿಲ್ 4ರಂದು ಜಲಜೀವನ ಯೋಜನೆಗಾಗಿ ನಡೆದ ಅಗೆಯುವ ಸಂದರ್ಭದಲ್ಲಿ ಇದೇ ಪ್ರದೇಶದಲ್ಲಿ ಮಹಾಶಿಲಾ ಸಂಸ್ಕೃತಿಯ ಮಡಿಕೆಗಳು ಮತ್ತು ಮೂಳೆ ತುಣುಕುಗಳು ದೊರೆತಿದ್ದವು. ನಂತರ ಮಳೆಯಿಂದಾಗಿ ಉತ್ಪನನ ಕಾರ್ಯ ವಿಳಂಬಗೊಂಡಿದ್ದರೂ, ನವೆಂಬರ್ 15ರಂದು ಮಣ್ಣಿನ ಪದರಗಳನ್ನು ತೆರವುಗೊಳಿಸುವ ಕಾರ್ಯ ಪುನರಾರಂಭಿಸಲಾಯಿತು. ಈ ವೇಳೆ ಕಲ್ಪತಾಯಮ ಬಳಿಯ ಮಣ್ಣಿನ ಕೋಣೆಯಲ್ಲಿ ಆ ಅಮೂಲ್ಯ ಕಲ್ಲುಗಳು, ಕಬ್ಬಿಣದ ಉಪಕರಣಗಳು ಮತ್ತು ಮಡಿಕೆ ಅವಶೇಷಗಳು ಮತ್ತೆ ಪತ್ತೆಯಾದವು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…