ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಸುಭಾಷ್ ನಗರದಲ್ಲಿ ಸುಮಾರು 99 ವರ್ಷ ಶಾರದಾ ಪೂಜಾ ಮಹೋತ್ಸವ ಕಾರ್ಯಕ್ರಮವು ಅದ್ಧೂರಿಯಾಗಿ ನಡೆದುಕೊಂಡು ಬಂದಿದ್ದು ದಿ.ಸದಾನಂದ ಪೂಂಜರ ನೇತೃತ್ವದಲ್ಲಿ ಶುರುವಾದ ಈ ಶಾರದಾ ಪೂಜಾ ಕಾರ್ಯಕ್ರಮವು 99 ವರ್ಷಗಳನ್ನು ಮುಗಿಸಿ ಇದೀಗ 100ನೇ ವರ್ಷಕ್ಕೆ ಹೆಜ್ಜೆಯನ್ನು ಇಟ್ಟಿದೆ.
ಈ ನಿಟ್ಟಿನಲ್ಲಿ ಇಂದು ಹೊಸ- ಹೊಸ ಯೋಚನೆ ಹಾಗೂ ಯೋಜನೆಯ ಜೊತೆಗೆ ಸಮಾಲೋಚನಾ ಸಭೆಯನ್ನು ನಡೆಸಲಾಯಿತು. ಶತಮಾನೋತ್ಸವ ಕಾರ್ಯಕ್ರಮವನ್ನು 5 ದಿನಗಳ ಕಾಲ ನಡೆಸುವುದಾಗಿ ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು ಜೊತೆಗೆ ಸಜೀಪಮೂಡ ಶಾಲೆಗೆ ದೊಡ್ಡಮಟ್ಟದಲ್ಲಿ ಏನಾದರೂ ಕೊಡುಗೆಯನ್ನು ನೀಡಬೇಕೆಂದು ಸಭೆಯಲ್ಲಿ ಚರ್ಚೆಯನ್ನು ಕೂಡ ಮಾಡಲಾಯಿತು. ಜೊತೆಗೆ ಶತಮಾನೋತ್ಸವದ ನಿಮಿತ್ತ ಹೊರೆಕಾಣಿಕೆ ಹಾಗೂ ವಿಜೃಂಭಣೆಯ ಶೋಭಯಾತ್ರೆಯನ್ನು ನಡೆಸಬೇಕು ಎಂಬ ಚರ್ಚೆಯೂ ಈ ಸಂದರ್ಭದಲ್ಲಿ ನಡೆಸಲಾಯಿತು. ಇನ್ನು ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾಗಿ ಸಮಾಜ ಸೇವಕರೂ ಹಾಗೂ ಉದ್ಯಮಿಗಳೂ ಆಗಿರುವ ನಗ್ರಿಗುತ್ತು ಶ್ರೀ ವಿವೇಕ್ ಶೆಟ್ಟಿಯವರನ್ನು ಆಯ್ಕೆ ಮಾಡಲಾಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಇದು ಒಂದು ಪುಣ್ಯದ ಹಾಗೂ ಜವಬ್ದಾರಿಯುತ ಸ್ಥಾನಮಾನವನ್ನು ನನಗೆ ನೀವು ನೀಡಿದ್ದೀರಿ. ನಿಮ್ಮ ಜೊತೆಗೆ ನಾನು ಖಂಡಿತವಾಗುಯೂ ಇರುತ್ತೇನೆ. ನಾವೆಲ್ಲರೂ ಜೊತೆಯಾಗಿ ಶತಮಾನೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ನಡೆಸೋಣ ಎಂದರು. ಇನ್ನು ಸಭೆಯಲ್ಲಿ ಶ್ರೀ ದೇವಿಪ್ರಸಾದ್ ಪೂಂಜಾ, ಶ್ರೀಕಾಂತ್ ಶೆಟ್ಟಿ ಸಂಕೇಶ, ಶಿವಪ್ರಸಾದ್ ಶೆಟ್ಟಿ, ಗಿರೀಶ್ ಪೆರ್ವ, ನವೀನ್ ಆಳ್ವಾ, ಯೋಗಿಶ್ ಬೆಳ್ಚಾಡ, ಪ್ರಹ್ಲಾದ್ ಹಾಗೂ ಕಿಶೋರ್, ಪುಶ್ಪಲತಾ, ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…