ಐದು ವರ್ಷದ ಬಾಲಕಿಯ ಮೇಲೆ 40 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿ ಆಕೆ ಸತ್ತಿದ್ದಾಳೆಂದು ತಿಳಿದು ಕಬ್ಬಿಣ ಗದ್ದೆಯಲ್ಲೇ ಬಿಟ್ಟು ಹೋದ ಕ್ರೂರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ತನ್ನ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಐದು ವರ್ಷದ ಬಾಲಕಿಯ ಮೇಲೆ 40 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಾನೆ. ನಂತರ ಆಕೆ ಸತ್ತಿರಬಹುದು ಎಂದು ಆಕೆಯನ್ನ ಕಬ್ಬಿಣ ಗದ್ದೆಯಲ್ಲೇ ಬಿಟ್ಟು ಬಂದಿದ್ದಾನೆ.
ಅತ್ಯಾಚಾರಕ್ಕೊಳಗಾದ ಬಾಲಕಿಯ ವಯಸ್ಸಿನ ಹುಡುಗ, ಆರೋಪಿಯ ಮಗ ತನ್ನ ತಂದೆ ಹುಡುಗಿಯನ್ನು ತನ್ನೊಂದಿಗೆ ಆಟವಾಡುತ್ತಿದ್ದಾಗ ಕರೆದುಕೊಂಡು ಹೋಗಿದ್ದಾನೆ ಎಂದು ಪೊಲೀಸರಿಗೆ ತಿಳಿಸಿದ್ದಾನೆ. ನಂತರ, ಆರೋಪಿಯ ತಪ್ಪೊಪ್ಪಿಗೆಯ ಆಧಾರದ ಮೇಲೆ ಪೊಲೀಸರು ಬುಧವಾರ ಹೊಲದಲ್ಲಿ ಬಿದ್ದಿದ್ದ ಬಾಲಕಿಯನ್ನು ವಶಪಡಿಸಿಕೊಂಡರು.
ಬಾರಾಬಂಕಿ (ಉತ್ತರ) ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್ಪಿ) ಅಶುತೋಷ್ ಮಿಶ್ರಾ ಮಾತನಾಡಿ, ಆರೋಪಿ ರಿಂಕು ವರ್ಮಾ ಅವರನ್ನು ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ನೆರೆಹೊರೆಯಲ್ಲಿ ಮತ್ತೊಂದು ಮಗುವಿನೊಂದಿಗೆ ಆಟವಾಡುತ್ತಿದ್ದಾಗ ನಾಪತ್ತೆಯಾಗಿದ್ದಳು ಎಂದು ಬಾಲಕಿಯ ಪೋಷಕರು ಹೇಳಿದ್ದಾರೆ ಎಂದು ಎಎಸ್ಪಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಲಕಿಯ ಮನೆಯವರು ಹುಡುಕಾಟ ಆರಂಭಿಸಿದ್ದರು. ಆದರೆ, ಸುಮಾರು ಎರಡು ಗಂಟೆಗಳ ಕಾಲ ಆಕೆ ಪತ್ತೆಯಾಗದ ಕಾರಣ, ಅವರು ರಾಂಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಮತ್ತು ಹತ್ತಿರದ ಪ್ರದೇಶಗಳಲ್ಲಿ ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಆದರೆ ಅವಳನ್ನು ಹುಡುಕುವಲ್ಲಿ ವಿಫಲರಾಗಿದ್ದಾರೆ ಎಂದು ಅಧಿಕಾರಿ ಹೇಳಿದರು. ಅತ್ಯಾಚಾರಗೋಳಗಾದ ಬಾಲಕಿನ ಸಮಾನ ವಯಸ್ಸಿನ ಮಕ್ಕಳನ್ನು ಪ್ರಶ್ನಿಸಿದಾಗ ಆರೋಪಿಯ ಮಗ ತನ್ನ ತಂದೆಯೇ ಆ ಹುಡುಗಿಯನ್ನು ಎತ್ತಿಕೊಂಡು ಹೋಗಿರುವುದಾಗಿ ಹೇಳಿದ್ದಾನೆ. “ಆರೋಪಿಯ ಮಗ, ಪೊಲೀಸರೊಂದಿಗೆ ಸಂವಹನ ನಡೆಸುತ್ತಿದ್ದಾಗ, “ಪಾಪಾ ಉಸ್ಕೋ ಸಾಥ್ ಲೆಕರ್ ಜಾ ರಹೇ ತೆ (ನನ್ನ ತಂದೆ ಅವಳನ್ನು ಕರೆದುಕೊಂಡು ಹೋಗುತ್ತಿದ್ದರು) ಎಂದು ಹೇಳಿದರು, ನಂತರ, ಹುಡುಗನ ತಂದೆ ರಿಂಕು ವರ್ಮಾ ಅವರನ್ನು ತೀವ್ರವಾಗಿ ವಿಚಾರಣೆಗೆ ಒಳಪಡಿಸಲಾಯಿತು. ಅಂತಿಮವಾಗಿ, ಅವನು ತನ್ನ ತಪ್ಪೊಪ್ಪಿಕೊಂಡನು. ಇತ್ತ ಅತ್ಯಾಚಾರಕ್ಕೊಳಗಾದ ಬಾಲಕಿಯು ಕಬ್ಬಿಣ ಗದ್ದೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕಿಯು ಗಂಬೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಲೈಂಗಿಕ ದೌರ್ಜನ್ಯದ ವೇಳೆ ಬಾಲಕಿ ಪ್ರಜ್ಞಾಹೀನಳಾಗಿದ್ದಾಳೆ ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದು, ಆಕೆ ಸತ್ತಿದ್ದಾಳೆ ಎಂದು ನಂಬಿ ಮೈದಾನದಲ್ಲಿ ಬಿಟ್ಟು ಹೋಗಿದ್ದ. ಬಾಲಕಿಯನ್ನು ಕರೆದುಕೊಂಡು ಹೋಗಿರುವ ಬಗ್ಗೆ ಪೊಲೀಸರಿಗೆ ತಿಳಿಸಿದಾಗ ಆರೋಪಿ ತನ್ನ ಮಗನನ್ನು ಥಳಿಸಲು ಪ್ರಾರಂಭಿಸಿದ್ದಾನೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…