ಜನ ಮನದ ನಾಡಿ ಮಿಡಿತ

Advertisement

ಕೊಡಗು: ತಾಯಿಯ ಕಣ್ಣು ತಪ್ಪಿಸಿ ತೋಟದೊಳಗೆ ಹೋದ ಮಗು; ಪತ್ತೆ ಹಚ್ಚಿದ್ದ ಸಾಕು ನಾಯಿ….!

ಮೊಬೈಲ್‌ನಲ್ಲಿ ಮುಳುಗಿದ್ದ ತಾಯಿಯ ಕಣ್ಣು ತಪ್ಪಿಸಿ ತೋಟದೊಳಗೆ ಹೋಗಿದ್ದ ಎರಡು ವರ್ಷದ ಮಗು ರಾತ್ರಿಯಿಡೀ ತೋಟದಲ್ಲಿ ಇದ್ದ ಘಟನೆ ಕೊಡಗಿನಲ್ಲಿ ನಡೆದಿದೆ.

ರಾತ್ರಿಯೆಲ್ಲಾ ತೋಟದಲ್ಲಿದ್ದ ಕಂದಮ್ಮನನ್ನು ಸಾಕು ನಾಯಿ ತೋಟದಲ್ಲಿ ಪತ್ತೆ ಹಚ್ಚಿ ಪಾಲಕರು ನಿರಾಳವಾಗುವಂತೆ ಮಾಡಿದ ಈ ಮನಕಲಕುವ ಘಟನೆ ನಡೆದಿರುವುದು ವೀರಾಜಪೇಟೆ ತಾಲೂಕಿನ ಕೊಂಗಣ ಗ್ರಾಮದಲ್ಲಿ. ನಾಪತ್ತೆಯಾಗಿದ್ದ ಮಗು ಸುನನ್ಯ ಭಾನುವಾರ ಪತ್ತೆಯಾಗಿದೆ.

ಶರಿ ಗಣಪತಿ ಎಂಬವರ ತೋಟದಲ್ಲಿ ಮಗುವಿನ ಪೋಷಕರು ಕೆಲಸ ಮಾಡುತ್ತಿದ್ರು, ಊಟದ ಬಳಿಕ ತಾಯಿ ನಾಗಿಣಿ ಮೊಬೈಲ್ ನೋಡಿಕೊಂಡು ಕುಳಿತಿದ್ದಾರೆ. ಸಂಜೆ ವೇಳೆಗೆ ಮಗು ನಾಪತ್ತೆಯಾಗಿರುವುದು ಅರಿವಿಗೆ ಬಂದಿದೆ. ಸ್ಥಳೀಯರು, ಅರಣ್ಯ ಇಲಾಖೆ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದಾರೆ. ಶೋಧ ಕಾರ್ಯಾಚರಣೆಯಲ್ಲಿ ಸಾಕುನಾಯಿಗಳು ಭಾಗವಹಿದ್ದವು. ಕೊನೆಗೂ ತೋಟದ ನಡುವೆ ಮಗುವನ್ನು ಶ್ವಾನ ಓರಿಯೋ ಪತ್ತೆ ಮಾಡಿದೆ. ಅನಿಲ್ ಕಾಳಪ್ಪ ಅವರಿಗೆ ಸೇರಿದ ಶ್ವಾನ ಇದಾಗಿದ್ದು, ಶ್ವಾನದಿಂದಾಗಿ ಕೊನೆಗೂ ಕಂದಮ್ಮ ಹೆತ್ತಮ್ಮನ ಮಡಿಲು ಸೇರಿದೆ. ಮಗು ಸುನನ್ಯ ಜೇನುಕುರುಬ ಸಮುದಾಯದ ಸುನಿಲ್-ನಾಗಿಣಿ ದಂಪತಿಯ ಪುತ್ರಿಯಾಗಿದ್ದಾಳೆ.

Leave a Reply

Your email address will not be published. Required fields are marked *

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

error: Content is protected !!