ಮೊಬೈಲ್ನಲ್ಲಿ ಮುಳುಗಿದ್ದ ತಾಯಿಯ ಕಣ್ಣು ತಪ್ಪಿಸಿ ತೋಟದೊಳಗೆ ಹೋಗಿದ್ದ ಎರಡು ವರ್ಷದ ಮಗು ರಾತ್ರಿಯಿಡೀ ತೋಟದಲ್ಲಿ ಇದ್ದ ಘಟನೆ ಕೊಡಗಿನಲ್ಲಿ ನಡೆದಿದೆ.
ರಾತ್ರಿಯೆಲ್ಲಾ ತೋಟದಲ್ಲಿದ್ದ ಕಂದಮ್ಮನನ್ನು ಸಾಕು ನಾಯಿ ತೋಟದಲ್ಲಿ ಪತ್ತೆ ಹಚ್ಚಿ ಪಾಲಕರು ನಿರಾಳವಾಗುವಂತೆ ಮಾಡಿದ ಈ ಮನಕಲಕುವ ಘಟನೆ ನಡೆದಿರುವುದು ವೀರಾಜಪೇಟೆ ತಾಲೂಕಿನ ಕೊಂಗಣ ಗ್ರಾಮದಲ್ಲಿ. ನಾಪತ್ತೆಯಾಗಿದ್ದ ಮಗು ಸುನನ್ಯ ಭಾನುವಾರ ಪತ್ತೆಯಾಗಿದೆ.
ಶರಿ ಗಣಪತಿ ಎಂಬವರ ತೋಟದಲ್ಲಿ ಮಗುವಿನ ಪೋಷಕರು ಕೆಲಸ ಮಾಡುತ್ತಿದ್ರು, ಊಟದ ಬಳಿಕ ತಾಯಿ ನಾಗಿಣಿ ಮೊಬೈಲ್ ನೋಡಿಕೊಂಡು ಕುಳಿತಿದ್ದಾರೆ. ಸಂಜೆ ವೇಳೆಗೆ ಮಗು ನಾಪತ್ತೆಯಾಗಿರುವುದು ಅರಿವಿಗೆ ಬಂದಿದೆ. ಸ್ಥಳೀಯರು, ಅರಣ್ಯ ಇಲಾಖೆ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದಾರೆ. ಶೋಧ ಕಾರ್ಯಾಚರಣೆಯಲ್ಲಿ ಸಾಕುನಾಯಿಗಳು ಭಾಗವಹಿದ್ದವು. ಕೊನೆಗೂ ತೋಟದ ನಡುವೆ ಮಗುವನ್ನು ಶ್ವಾನ ಓರಿಯೋ ಪತ್ತೆ ಮಾಡಿದೆ. ಅನಿಲ್ ಕಾಳಪ್ಪ ಅವರಿಗೆ ಸೇರಿದ ಶ್ವಾನ ಇದಾಗಿದ್ದು, ಶ್ವಾನದಿಂದಾಗಿ ಕೊನೆಗೂ ಕಂದಮ್ಮ ಹೆತ್ತಮ್ಮನ ಮಡಿಲು ಸೇರಿದೆ. ಮಗು ಸುನನ್ಯ ಜೇನುಕುರುಬ ಸಮುದಾಯದ ಸುನಿಲ್-ನಾಗಿಣಿ ದಂಪತಿಯ ಪುತ್ರಿಯಾಗಿದ್ದಾಳೆ.
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…
ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಮೃತನನ್ನು ಪಚ್ಚನಾಡಿ ಬಂದಲೆ ನಿವಾಸಿ ಬಬಿತ್ ಎಂದು ಗುರುತಿಸಲಾಗಿದೆ. ಸಾವಿನ ಕುರಿತು…