ಮೊಬೈಲ್ನಲ್ಲಿ ಮುಳುಗಿದ್ದ ತಾಯಿಯ ಕಣ್ಣು ತಪ್ಪಿಸಿ ತೋಟದೊಳಗೆ ಹೋಗಿದ್ದ ಎರಡು ವರ್ಷದ ಮಗು ರಾತ್ರಿಯಿಡೀ ತೋಟದಲ್ಲಿ ಇದ್ದ ಘಟನೆ ಕೊಡಗಿನಲ್ಲಿ ನಡೆದಿದೆ.
ರಾತ್ರಿಯೆಲ್ಲಾ ತೋಟದಲ್ಲಿದ್ದ ಕಂದಮ್ಮನನ್ನು ಸಾಕು ನಾಯಿ ತೋಟದಲ್ಲಿ ಪತ್ತೆ ಹಚ್ಚಿ ಪಾಲಕರು ನಿರಾಳವಾಗುವಂತೆ ಮಾಡಿದ ಈ ಮನಕಲಕುವ ಘಟನೆ ನಡೆದಿರುವುದು ವೀರಾಜಪೇಟೆ ತಾಲೂಕಿನ ಕೊಂಗಣ ಗ್ರಾಮದಲ್ಲಿ. ನಾಪತ್ತೆಯಾಗಿದ್ದ ಮಗು ಸುನನ್ಯ ಭಾನುವಾರ ಪತ್ತೆಯಾಗಿದೆ.
ಶರಿ ಗಣಪತಿ ಎಂಬವರ ತೋಟದಲ್ಲಿ ಮಗುವಿನ ಪೋಷಕರು ಕೆಲಸ ಮಾಡುತ್ತಿದ್ರು, ಊಟದ ಬಳಿಕ ತಾಯಿ ನಾಗಿಣಿ ಮೊಬೈಲ್ ನೋಡಿಕೊಂಡು ಕುಳಿತಿದ್ದಾರೆ. ಸಂಜೆ ವೇಳೆಗೆ ಮಗು ನಾಪತ್ತೆಯಾಗಿರುವುದು ಅರಿವಿಗೆ ಬಂದಿದೆ. ಸ್ಥಳೀಯರು, ಅರಣ್ಯ ಇಲಾಖೆ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದಾರೆ. ಶೋಧ ಕಾರ್ಯಾಚರಣೆಯಲ್ಲಿ ಸಾಕುನಾಯಿಗಳು ಭಾಗವಹಿದ್ದವು. ಕೊನೆಗೂ ತೋಟದ ನಡುವೆ ಮಗುವನ್ನು ಶ್ವಾನ ಓರಿಯೋ ಪತ್ತೆ ಮಾಡಿದೆ. ಅನಿಲ್ ಕಾಳಪ್ಪ ಅವರಿಗೆ ಸೇರಿದ ಶ್ವಾನ ಇದಾಗಿದ್ದು, ಶ್ವಾನದಿಂದಾಗಿ ಕೊನೆಗೂ ಕಂದಮ್ಮ ಹೆತ್ತಮ್ಮನ ಮಡಿಲು ಸೇರಿದೆ. ಮಗು ಸುನನ್ಯ ಜೇನುಕುರುಬ ಸಮುದಾಯದ ಸುನಿಲ್-ನಾಗಿಣಿ ದಂಪತಿಯ ಪುತ್ರಿಯಾಗಿದ್ದಾಳೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…