ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ್ದ ರಮಾನಂದ; ಆತ್ಮಹತ್ಯೆ ಅಲ್ಲ ಇದು ಕೊಲೆ..!

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ್ದ ರಮಾನಂದ ಅವರದ್ದು ಆತ್ಮಹತ್ಯೆ ಅಲ್ಲ, ಇದೊಂದು ವ್ಯವಸ್ಥಿತ ಕೊಲೆಯಾಗಿರುವ ಬಗ್ಗೆ ಸಂಶಯವಿದ್ದು, ಈ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ನ್ಯಾಯ ಒದಗಿಸಿ ಕೊಡಿ ಎಂದು ತಾಯಿ ಜಾನಕಿ ಅವರು ವಾಮಂಜರೂರು ಪೋಲೀಸ್ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ.

ಬರಿಮಾರು ಗ್ರಾಮದ ದೇಲಬೆಟ್ಟು ನಿವಾಸಿ ರಮಾನಂದ ಎಂಬಾತ ನ.25 ರಂದು ನಾಪತ್ತೆಯಾಗಿದ್ದ, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ನಾಪತ್ತೆ ದೂರು ಕೂಡ ದಾಖಲಾಗಿತ್ತು. ಈ ಮಧ್ಯೆ ಅದೇ ದಿನ ಮಧ್ಯಾಹ್ನದ ವೇಳೆ ಈತನ ಮೃತದೇಹ ಮಂಗಳೂರು ತಾಲೂಕಿನ ವಾಮಂಜೂರು ಕೆತ್ತಿಕಲ್ಲು ಎಂಬಲ್ಲಿ ಪತ್ತೆಯಾಗಿದೆ. ರಮಾನಂದ ಅವರ ಮೃತದೇಹ ಕೆತ್ತಿಕಲ್ಲುವಿನ ಗುಡ್ಡದಲ್ಲಿ ಮರದ ಕೆಳಗೆ ಬಿದ್ದ ಸ್ಥಿತಿಯಲ್ಲಿ ಇತ್ತು, ಮೇಲ್ನೋಟಕ್ಕೆ ಈತ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಹಗ್ಗ ತುಂಡಾಗಿ ಕೆಳಗೆ ಬಿದ್ದಂತೆ ಕಾಣಿಸಿಕೊಂಡಿದ್ದು, ವಾಮಂಜರೂ ಪೋಲೀಸ್ ಠಾಣೆಯಲ್ಲಿ ಈ ಬಗ್ಗೆ ಆತ್ಮಹತ್ಯೆ ಪ್ರಕರಣ ದಾಖಲಾಗಿತ್ತು.

ಆದರೆ ಮನೆಯವರಿಗೆ ಈತನ ಸಾವಿನ ಬಗ್ಗೆ ಸಂಶಯವಿದ್ದು, ಇದೊಂದು ವ್ಯವಸ್ಥಿತ ರೀತಿಯ ಕೊಲೆಯಾಗಿರಬಹುದು ಎಂಬ ಸಂಶಯ ವ್ಯಕ್ತವಾಗಿದ್ದು, ಸೂಕ್ತವಾದ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡುವಂತೆ ಇದೀಗ ತಾಯಿ ಠಾಣೆಯ ಮೆಟ್ಟಿಲು ಏರಿದ್ದಾರೆ. ರಮಾನಂದ ಅವರಿಗೆ ಕಳೆದ ಮೂರು ವರ್ಷಗಳಿಂದ ವಾಮಂಜೂರು ಭಾಗದ ಹುಡುಗಿ ಜೊತೆ ಪ್ರೀತಿ ಇತ್ತು, ಕೆಲ ದಿನಗಳಿಂದ ಇವರಿಬ್ಬರ ನಡುವೆ ಭಿನ್ನಾಭಿಪ್ರಾಯ ಬಂದಿದ್ದು, ಆಕೆಯ ಕುಟುಂಬಿಕರು ಈತನಿಗೆ ಬೆದರಿಕೆ ಹಾಕಿದ್ದಾರೆ ಎಂಬ ದೂರು ಮನೆಯವರದ್ದು. ಹಾಗಾಗಿ ಹುಡುಗಿಯ ಜೊತೆ ಮನೆಯವರು ಸೇರಿ ಈತನನ್ನು ಕೊಲೆ ಮಾಡಿದ್ದಾರೆ ಎಂಬ ದೂರನ್ನು ತಾಯಿ ಜಾನಕಿ ಅವರು ನೀಡಿದ್ದು, ನ್ಯಾಯಕ್ಕಾಗಿ ಪೋಲೀಸ್ ಮೊರೆ ಹೋಗಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!