ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಉಡುಪಿ: ಮನೆಗೆ ನುಗ್ಗಿ 65.79 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ; ಕಳ್ಳನ ಬಂಧನ….!

ಉಡುಪಿ ಚಿಟ್ಪಾಡಿಯ ಶಾರದಾಂಬ ದೇವಾಸ್ಥಾನ ಗೋಪುರ ಬಳಿಯ ಮನೆಯೊಂದರಲ್ಲಿ ನ.30ರಂದು 65.79 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಉಡುಪಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕುಕ್ಕೆಹಳ್ಳಿ ಗ್ರಾಮದ ಕುಕ್ಕಿಕಟ್ಟೆ ನಿವಾಸಿ ಸುಕೇಶ ನಾಯ್ಕ್ ಬಂಧಿತ ಆರೋಪಿ. ಚಿಟ್ಪಾಡಿಯ ಶೈಲಾ ವಿಲ್ಲೆಲ್ ಮೀನಾ ಅವರ ಮನೆಗೆ ನುಗ್ಗಿದ ಕಳ್ಳರು ಸುಮಾರು 65.79 ಲಕ್ಷ ಮೌಲ್ಯದ ಸೊತ್ತು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಉಡುಪಿ ನಗರ ಠಾಣೆ ಪೊಲೀಸರು, ಕಿನ್ನಿಮೂಲ್ಕಿ ಬಳಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಚಾರಣೆ ವೇಳೆ ಕಳ್ಳ ತಾನು ಕದ್ದಿರುವ ಸೊತ್ತುಗಳನ್ನು ಅಜ್ಜರಕಾಡು ಮನೆಯೊಂದರಲ್ಲಿ ಬಚ್ಚಿಟ್ಟಿರುವುದಾಗಿ ತಿಳಿಸಿದ್ದಾನೆ. ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು 548.31 ಗ್ರಾಂ ತೂಕದ 65,79,720 ರೂ ಮೌಲ್ಯದ ಸೊತ್ತುಗಳನ್ನು ಸ್ವಾಧಿನಪಡಿಸಿಕೊಂಡಿದ್ದಾರೆ. ಆರೋಪಿ ವಿರುದ್ಧ ಈಗಾಗಲೇ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 11 ಮನೆಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಉಡುಪಿ ನಗರ ಠಾಣೆಯಲ್ಲಿ 5 ಪ್ರಕರಣಗಳು ದಾಖಲಾಗಿದ್ದು, 4 ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ.

ಹಿರಿಯಡ್ಕ ಠಾಣೆಯಲ್ಲಿ 03 ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ 1 ಪ್ರಕರಣದಲ್ಲಿ ಶಿಕ್ಷೆಯಾಗಿದೆ. ಬ್ರಹ್ಮಾವರ ಠಾಣೆಯಲ್ಲಿ 2 ಪ್ರಕರಣ ದಾಖಲಾಗಿದೆ ಹಾಗೂ ಮಣಿಪಾಲ್ ಠಾಣೆಯಲ್ಲಿ 1 ಪ್ರಕರಣವು ಮಾನ್ಯ ನ್ಯಾಯಲಯದ ವಿಚಾರಣೆಯಲ್ಲಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!