ಯುಎಇ ಬಂಟ್ಸ್ ನ 48 ನೇ ವರ್ಷದ “ಭಾವೈಕ್ಯ” ಬಂಟರ ಮಹಾಸಮಾಗಮವು ಡಿಸೆಂಬರ್ 14ರಂದು ನಗರದ ಶೇಖ್ ಝಯೀದ್ ರಸ್ತೆಯ ಮಿಲೆನಿಯಂ ಪ್ಲಾಜಾ ಹೋಟೆಲ್ ಡೌನ್ ಟೌನ್ ಹೋಟೆಲ್ (ಹಳೆಯ ಕ್ರೌನ್ ಪ್ಲಾಜಾ) ನ ಸಭಾಂಗಣದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಯುಎಇ ಬಂಟರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ “ಬಂಟ ವಿಭೂಷಣ ಪ್ರಶಸ್ತಿ” ಪ್ರದಾನ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಯುಎಇ ಬಂಟ ಬಾಂಧವರಿಂದ ತುಳುನಾಡ ಮಣ್ಣ್ ದ ಮಹಿಮೆ, ಭಾರತದ ಸಂಸ್ಕೃತಿಯ ಪಯಣ, ಬಂಟೆರ್ನ ಐಸಿರ, ಕಿರುಚಿತ್ರ ಸ್ಪರ್ಧೆ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ. ಹಾಗೆಯೇ ವರ್ಷಂಪ್ರತಿ ಕೊಡಮಾಡುವ ಯುಎಇ ಬಂಟರ ಪ್ರತಿಷ್ಠಿತ ಬಂಟ ವಿಭೂಷಣ ಪ್ರಶಸ್ತಿಯನ್ನು ಮಂಗಳೂರು ಕಂಬಳದ ರೂವಾರಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರಿಗೆ ನೀಡಿ ಗೌರವಿಸಲಾಗುವುದು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕನ್ನಡ ಚಿತ್ರರಂಗದ ನಟ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ, ಬಾಲಿವುಡ್ ನಟ ವಿವೇಕ್ ಒಬೆರಾಯ್ ರವರು ಆಗಮಿಸಲಿದ್ದಾರೆ. ಯುಎಇಯಲ್ಲಿ ಇರುವ ಎಲ್ಲಾ ಬಂಟ ಬಾಂಧವರು 48 ನೇ ವರ್ಷದ ಬಂಟರ ಮಹಾಸಮಾಗಮದಲ್ಲಿ ಭಾಗವಹಿಸಬೇಕೆಂದು ಹಾಗೂ ಬೆಳಿಗ್ಗೆ 10 ಗಂಟೆಯ ಒಳಗೆ ಆಗಮಿಸಿದವರಿಗೆ ಉಚಿತ ಪ್ರವೇಶ ಮತ್ತು ಎಂಟು ಗ್ರಾಂ ಚಿನ್ನದ ನಾಣ್ಯ ಗೆಲ್ಲುವ ಅವಕಾಶ ಇದೆ ಎಂದು ಯುಎಇ ಬಂಟ್ಸ್ ನ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿಯವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇನ್ನು ಪತ್ರಿಕಾಗೋಷ್ಠಿಯಲ್ಲಿ ಯುಎಇ ಬಂಟ್ಸ್ ನ ಪೋಷಕರಾದ ಸರ್ವೋತ್ತಮ ಶೆಟ್ಟಿ,ಉಪಾಧ್ಯಕ್ಷರಾದ ಪ್ರೇಮ್ ನಾಥ್ ಶೆಟ್ಟಿ, ಪ್ರದಾನ ಕಾರ್ಯದರ್ಶಿ ರವಿರಾಜ್ ಶೆಟ್ಟಿ ಮತ್ತು 2025 ಸಾಲಿನ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…