ಬಟ್ಟೆ ಒಣಗಲು ಹಾಕುವ ದಾರದಿಂದ ಪತ್ನಿಯ ಕುತ್ತಿಗೆ ಬಿ*ಗಿದು ಕೊ*ಲೆಗೈದ ವೃದ್ಧ ಬಳಿಕ ತಾನು ನೇ*ಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೇಬಿ(60) ಕೊ*ಲೆಗೀಡಾದ ವೃದ್ಧೆಯಾಗಿದ್ದಾರೆ. ವೆಂಕಟೇಶನ್(65) ಹ*ತ್ಯೆಗೈದು ಆ*ತ್ಮಹ*ತ್ಯೆ ಮಾಡಿಕೊಂಡ ಪತಿ. ವೆಂಕಟೇಶನ್ ಬಿಎಂಟಿಸಿ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದು, ಸದ್ಯ ನಿವೃತ್ತಿ ಹೊಂದಿದ್ದರು. ಬೇಬಿ ಸ್ಟ್ರೋಕ್ಗೆ ಒಳಗಾಗಿ ವ್ಹೀಲ್ ಚೇರ್ನಲ್ಲಿ ಜೀವನ ಸಾಗಿಸುತ್ತಿದ್ದರು. ಗಂಡ ಹೆಂಡತಿ ನಡುವೆ ಸಣ್ಣ ಪುಟ್ಟ ವಿಚಾರಕ್ಕೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರು ಹೊರಗಡೆ ಹೋಗುತ್ತಿದ್ದಂತೆ ಜಗಳ ಮಾಡಿಕೊಳ್ಳುತ್ತಿದ್ದರಂತೆ. ಹಾಗೇ, ಡಿ.2 ರಂದು ಇಬ್ಬರು ಜಗಳವಾಡಿದ್ದು, ಈ ಜಗಳ ತಾರಕಕ್ಕೇರಿ ವೆಂಕಟೇಶನ್ ಬಟ್ಟೆ ಒಣಗಲು ಹಾಕುವ ದಾರದಿಂದ ಪತ್ನಿಯ ಕುತ್ತಿಗೆ ಬಿ*ಗಿದು ಹ*ತ್ಯೆ ಮಾಡಿದ್ದಾರೆ. ಬಳಿಕ ಅದರಿಂದಲೇ ತಾನು ಕೂಡ ನೇ*ಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…