ಬಟ್ಟೆ ಒಣಗಲು ಹಾಕುವ ದಾರದಿಂದ ಪತ್ನಿಯ ಕುತ್ತಿಗೆ ಬಿ*ಗಿದು ಕೊ*ಲೆಗೈದ ವೃದ್ಧ ಬಳಿಕ ತಾನು ನೇ*ಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೇಬಿ(60) ಕೊ*ಲೆಗೀಡಾದ ವೃದ್ಧೆಯಾಗಿದ್ದಾರೆ. ವೆಂಕಟೇಶನ್(65) ಹ*ತ್ಯೆಗೈದು ಆ*ತ್ಮಹ*ತ್ಯೆ ಮಾಡಿಕೊಂಡ ಪತಿ. ವೆಂಕಟೇಶನ್ ಬಿಎಂಟಿಸಿ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದು, ಸದ್ಯ ನಿವೃತ್ತಿ ಹೊಂದಿದ್ದರು. ಬೇಬಿ ಸ್ಟ್ರೋಕ್ಗೆ ಒಳಗಾಗಿ ವ್ಹೀಲ್ ಚೇರ್ನಲ್ಲಿ ಜೀವನ ಸಾಗಿಸುತ್ತಿದ್ದರು. ಗಂಡ ಹೆಂಡತಿ ನಡುವೆ ಸಣ್ಣ ಪುಟ್ಟ ವಿಚಾರಕ್ಕೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರು ಹೊರಗಡೆ ಹೋಗುತ್ತಿದ್ದಂತೆ ಜಗಳ ಮಾಡಿಕೊಳ್ಳುತ್ತಿದ್ದರಂತೆ. ಹಾಗೇ, ಡಿ.2 ರಂದು ಇಬ್ಬರು ಜಗಳವಾಡಿದ್ದು, ಈ ಜಗಳ ತಾರಕಕ್ಕೇರಿ ವೆಂಕಟೇಶನ್ ಬಟ್ಟೆ ಒಣಗಲು ಹಾಕುವ ದಾರದಿಂದ ಪತ್ನಿಯ ಕುತ್ತಿಗೆ ಬಿ*ಗಿದು ಹ*ತ್ಯೆ ಮಾಡಿದ್ದಾರೆ. ಬಳಿಕ ಅದರಿಂದಲೇ ತಾನು ಕೂಡ ನೇ*ಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…
ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ. ಬೆಂಜನಪದವಿನ…
ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ…