ಅಂಗಡಿಯಿಂದ ತಿಂಡಿ ತೆಗೆದುಕೊಂಡು ಬರುವ ಸಂದರ್ಭದಲ್ಲಿ ರಸ್ತೆ ದಾಟುತ್ತಿರುವ ಪುಟ್ಟ ಬಾಲಕನಿಗೆ ಕಾರು ಡಿ*ಕ್ಕಿ ಹೊಡೆದು ಸಾವನ್ನಪ್ಪಿದ ದಾರುಣ ಘಟನೆ ಡಿಸೆಂಬರ್ 3ರಂದು ಚಾರ್ಮಾಡಿಯಲ್ಲಿ ಸಂಭವಿಸಿದೆ.

ಚಾರ್ಮಾಡಿ ಗ್ರಾಮ ಪಂಚಾಯತ್ ಸದಸ್ಯ ಬೀಟಿಗೆ ನಿವಾಸಿ ಸಿದ್ದಿಕ್ ಯು.ಪಿ. ಎಂಬವರ ಪುತ್ರ 3 ವರ್ಷದ ಮಹಮ್ಮದ್ ಹಝೀರಿನ್ ಈ ದುರ್ಘಟನೆಯಲ್ಲಿ ಮೃತಪಟ್ಟ ನತದೃಷ್ಟ ಬಾಲಕ. ಈತ ತನ್ನ ಮನೆಯ ಸಮೀಪದ ರಸ್ತೆಯ ಎದುರಗಡೆ ಇರುವ ಅಂಗಡಿಗೆ ತಿಂಡಿ ತರಲೆಂದು ಹೋಗಿ, ರಸ್ತೆ ದಾಟುತ್ತಿದ್ದ ವೇಳೆ ಈ ದುರಂತ ಘಟನೆ ನಡೆದಿದೆ.



