ಎಲ್ಲರ ಬಾಳಲ್ಲೂ ಮದುವೆ ಅನ್ನೋದು ಸಂಭ್ರಮದ ದಿನ. ಈ ದಿನಕ್ಕಾಗಿ ವರ್ಷಾನುಗಟ್ಟಲೇ ಕನಸು ಕಂಡಿರುತ್ತಾರೆ. ಆ ಒಂದು ದಿನಕ್ಕಾಗಿ ಗಂಡು-ಹೆಣ್ಣು ಕನಸಿನ ಸರಮಾಲೆಯನ್ನೇ ಕಟ್ಟಿಕೊಂಡಿರುತ್ತಾರೆ. ಆದ್ರೆ ಜವರಾಯನ ಆಟದ ಮುಂದೆ ಯಾವುದು ಶಾಶ್ವತ ಅಲ್ಲ ಅನ್ನೋದಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ.
ಶಿವಮೊಗ್ಗದ ಭದ್ರಾವತಿಯ ಹನುಮಂತಪುರ ವಾಸಿ ರಮೇಶ್ ಹರಪನಹಳ್ಳಿಯ ಬಂಡಿ ಮೂಲದ ಯುವತಿ ಜೊತೆ ಮದುವೆ ನಿಶ್ಚಯವಾಗಿತ್ತು. ಆದರೆ ಮದುವೆ ಆಗಿ 24 ಗಂಟೆ ಕಳೆಯುವ ಮೊದಲೇ ಮದುವೆ ಮನೆಯಲ್ಲಿ ಸೂತಕ ಆವರಿಸಿದೆ. ಶಿವಮೊಗ್ಗದ ಭದ್ರಾವತಿಯ ಹನುಮಂತಪುರ ನಿವಾಸಿ ಮೃತ ರಮೇಶ್ಗೆ ಹರಪನಹಳ್ಳಿಯ ಬಂಡಿ ಮೂಲದ ಯುವತಿ ಜೊತೆ ನವೆಂಬರ್ 30ರಂದು ಶಿವಮೊಗ್ಗದಲ್ಲಿ ವಿವಾಹ ನೆರವೇರಿರುತ್ತೆ. ಮದುವೆ ಬಳಿಕ ಆರತಕ್ಷತೆಗಾಗಿ ಮೃತ ರಮೇಶ್ ಬಂಡ್ರಿಗೆ ತೆರಳಿರುತ್ತಾರೆ. ಈ ವೇಳೆ ದೇವಸ್ಥಾನದಿಂದ ಮನೆವರಿಗೂ ವಧು-ವರರ ಮೆರವಣಿಗೆ ನಡೆದು ನವ ದಂಪತಿ ದೇವರ ದರ್ಶನ ಪಡೆಯಲು ಹೋಗ್ತಿರ್ತಾರೆ. ಇನ್ನೇನು ದೇವರಿಗೆ ಕೈ ಮುಗಿದು ವಾಪಸ್ ಮನೆಗೆ ತೆರಳುವಾಗ ರಮೇಶ್ ಕುಸಿದುಬಿದ್ದಿದ್ದಾನೆ. ತಕ್ಷಣವೇ ಆತನನ್ನ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುತ್ತದೆ. ಆದ್ರೆ, ಅಷ್ಟರಲ್ಲೇ ಹೃದಯಾಘಾತದಿಂದ ರಮೇಶ್ ಸಾವನ್ನಪ್ಪಿದ್ದಾನೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…