ತಡರಾತ್ರಿ ಅಕ್ರಮವಾಗಿ ಮನೆಗೆ ಪ್ರವೇಶಿಸಿ ಮನೆಯ ಸದಸ್ಯರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಕಡಬ ಠಾಣೆಯ ಹೆಡ್ ಕಾನ್ಸ್ಟೇಬಲ್ ರಾಜು ನಾಯ್ಕ್ ಎಂಬಾತನನ್ನು ಬಂಧಿಸಿ ಆತನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಕಡಬ ತಾಲೂಕು ಕೊಯಿಲ ನಿವಾಸಿ ಬಾಬು ಗೌಡ ಎಂಬವರ ಮನೆಯ ಸಮೀಪವಿರುವ ಅವರ ಸಹೋದರ ಹರೀಶ ಎಂಬವರ ಮನೆಗೆ ತಡರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಅಕ್ರಮ ಪ್ರವೇಶಿಸಿದ್ದು ಮನೆಯ ಸದಸ್ಯರು ಆತನನ್ನು ಹಿಡಿದುಕೊಂಡಿದ್ದು, ಈ ವೇಳೆ ಆತ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮನೆಯ ಸದಸ್ಯ ಚೇತನ್ ಎಂಬಾತನಿಗೆ ಕೈಯಿಂದ ಹಲ್ಲೆ ಮಾಡಿದ್ದಾನೆ. ಈ ವೇಳೆ ಆತನನ್ನು ಉಳಿದವರ ಸಹಾಯದಿಂದ ಹಿಡಿದು ವಿಚಾರಿಸಿದಾಗ ಅಪರಿಚಿತ ವ್ಯಕ್ತಿ ಕಡಬ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೇಬಲ್ ರಾಜು ನಾಯ್ಕ ಎಂದು ತಿಳಿದುಬಂದಿದೆ.
ರಾಜು ನಾಯ್ಕರವರು ತಡರಾತ್ರಿ ಮನೆಯೊಳಗೆ ಅಕ್ರಮವಾಗಿ ಪ್ರವೇಶ ಮಾಡಿ, ಮನೆಯ ಸದಸ್ಯರಿಗೆ ಕೈಯಿಂದ ಹಲ್ಲೆ ನಡೆಸಿದ ಬಗ್ಗೆ ಬಾಬು ಗೌಡ ಅವರು ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಈ ದೂರಿನ ಹಿನ್ನೆಲೆಯಲ್ಲಿ ಆರೋಪಿ ರಾಜು ನಾಯ್ಕರವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಹಾಗೂ ಆತನನ್ನು ತಕ್ಷಣ ಕರ್ತವ್ಯದಿಂದ ಅಮಾನತುಗೊಳಿಸಲಾಗಿರುತ್ತದೆ ಎಂದು ದ.ಕ.ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…