ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕೆನರಾ ವಿಕಾಸ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

ಮಂಗಳೂರು ಇಲ್ಲಿನ ಕೆನರಾ ವಿಕಾಸ್ ಪದವಿಪೂರ್ವ ಕಾಲೇಜಿನಲ್ಲಿ ದಿನಾಂಕ 27-7-2023 ರಂದು ವಿದ್ಯಾರ್ಥಿ ಸಂಘ ಉದ್ಘಾಟನೆಗೊಂಡಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ನ ಆಡಳಿತ ಮಂಡಳಿ ಸದಸ್ಯ ಹಾಗೂ ಕೆನರಾ ವಿಕಾಸ್ ಸಮೂಹ ಸಂಸ್ಥೆಯ ಸಂಯೋಜಕ ಶ್ರೀಯುತ ಬಸ್ತಿ ಪುರುಷೋತ್ತಮ ಶೆಣೈ ಮಾತನಾಡುತ್ತ ವಿವಿಧ ಕ್ಲಬ್ ಗ ಳ ಯೋಜನೆ ಸಿದ್ಧಪಡಿಸಿದ ನಾಯಕರ ಕೆಲಸವನ್ನು ಹೊಗಳಿದರು.

ತಮ್ಮ ಕೆಲಸಗಳಲ್ಲಿ ಸೋಲನ್ನು ಅನುಭವಿಸಿದರೆ ನಾಯಕರು ಅದನ್ನು ನಿಭಾಯಿಸಬೇಕು. ಯಶಸ್ಸನ್ನು ಹೊಂದಿದರೆ ಎಲ್ಲಾ ಸದಸ್ಯರಿಗೆ ಅದನ್ನು ಹಂಚಬೇಕು ಎಂದರು.ಕೆನರಾ ಹೈಸ್ಕೂಲ್ ಅಸೋಸಿಯೇಷನ್ ನ ಖಜಾಂಚಿ ಮತ್ತು ಕೆನರಾ ವಿಕಾಸ್ ಸಮೂಹ ಸಂಸ್ಥೆಗಳ ಸಂಚಾಲಕರಾದ ಶ್ರೀ. ಸಿಎ ಎಂ. ವಾಮನ್ ಕಾಮತ್ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡುತ್ತಾ, ಕಾಲೇಜು ಸೇರಿದಂತೆ ಎಲ್ಲಾ ಕಡೆ ವಿವಿಧತೆಯಲ್ಲಿ ಏಕತೆಯನ್ನು ನೋಡುತ್ತಿದ್ದೇವೆ. ಪರಸ್ಪರ ಸಹಕಾರದೊಂದಿಗೆ ಪ್ರಜಾಪ್ರಭುತ್ವ ಸಿದ್ಧಾಂತವನ್ನು ಎತ್ತಿ ಹಿಡಿಯಬೇಕು ಎಂದರು.

ಕೆನರಾ ವಿಕಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಐಶ್ವರ್ಯ ಕೆ ವಿದ್ಯಾರ್ಥಿ ನಾಯಕರು ಹಾಗೂ ವಿವಿಧ ಸಂಘದ ಮುಖ್ಯಸ್ಥರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.ಕೆನರಾ ವಿಕಾಸ್ ಸಂಸ್ಥೆಯ ಕ್ಯಾಂಪಸ್ ಸಂಯೋಜಕರಾದ ಶ್ರೀ. ಪಾರ್ಥ ಸಾರಥಿ ಜೆ. ಪಾಲೆಮಾರ್, ಕೆನರಾ ವಿಕಾಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಸುಗುಣಾ ನಾಯಕ್ ಮತ್ತು ಸಿಬ್ಬಂದಿಗಳು, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಮುಖಂಡರಾದ ಹಿತೇಶ್ ಸ್ವಾಗತಿಸಿದರು. ಅನಂತ್ ವಂದಿಸಿದರು. ವಿದ್ಯಾರ್ಥಿನಿ ಪ್ರಮಿತಿ ನಿರೂಪಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!