ಕರಾವಳಿ

ಮಂಗಳೂರು: ಕೆನರಾ ವಿಕಾಸ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

ಮಂಗಳೂರು ಇಲ್ಲಿನ ಕೆನರಾ ವಿಕಾಸ್ ಪದವಿಪೂರ್ವ ಕಾಲೇಜಿನಲ್ಲಿ ದಿನಾಂಕ 27-7-2023 ರಂದು ವಿದ್ಯಾರ್ಥಿ ಸಂಘ ಉದ್ಘಾಟನೆಗೊಂಡಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ನ ಆಡಳಿತ ಮಂಡಳಿ ಸದಸ್ಯ ಹಾಗೂ ಕೆನರಾ ವಿಕಾಸ್ ಸಮೂಹ ಸಂಸ್ಥೆಯ ಸಂಯೋಜಕ ಶ್ರೀಯುತ ಬಸ್ತಿ ಪುರುಷೋತ್ತಮ ಶೆಣೈ ಮಾತನಾಡುತ್ತ ವಿವಿಧ ಕ್ಲಬ್ ಗ ಳ ಯೋಜನೆ ಸಿದ್ಧಪಡಿಸಿದ ನಾಯಕರ ಕೆಲಸವನ್ನು ಹೊಗಳಿದರು.

ತಮ್ಮ ಕೆಲಸಗಳಲ್ಲಿ ಸೋಲನ್ನು ಅನುಭವಿಸಿದರೆ ನಾಯಕರು ಅದನ್ನು ನಿಭಾಯಿಸಬೇಕು. ಯಶಸ್ಸನ್ನು ಹೊಂದಿದರೆ ಎಲ್ಲಾ ಸದಸ್ಯರಿಗೆ ಅದನ್ನು ಹಂಚಬೇಕು ಎಂದರು.ಕೆನರಾ ಹೈಸ್ಕೂಲ್ ಅಸೋಸಿಯೇಷನ್ ನ ಖಜಾಂಚಿ ಮತ್ತು ಕೆನರಾ ವಿಕಾಸ್ ಸಮೂಹ ಸಂಸ್ಥೆಗಳ ಸಂಚಾಲಕರಾದ ಶ್ರೀ. ಸಿಎ ಎಂ. ವಾಮನ್ ಕಾಮತ್ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡುತ್ತಾ, ಕಾಲೇಜು ಸೇರಿದಂತೆ ಎಲ್ಲಾ ಕಡೆ ವಿವಿಧತೆಯಲ್ಲಿ ಏಕತೆಯನ್ನು ನೋಡುತ್ತಿದ್ದೇವೆ. ಪರಸ್ಪರ ಸಹಕಾರದೊಂದಿಗೆ ಪ್ರಜಾಪ್ರಭುತ್ವ ಸಿದ್ಧಾಂತವನ್ನು ಎತ್ತಿ ಹಿಡಿಯಬೇಕು ಎಂದರು.

ಕೆನರಾ ವಿಕಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಐಶ್ವರ್ಯ ಕೆ ವಿದ್ಯಾರ್ಥಿ ನಾಯಕರು ಹಾಗೂ ವಿವಿಧ ಸಂಘದ ಮುಖ್ಯಸ್ಥರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.ಕೆನರಾ ವಿಕಾಸ್ ಸಂಸ್ಥೆಯ ಕ್ಯಾಂಪಸ್ ಸಂಯೋಜಕರಾದ ಶ್ರೀ. ಪಾರ್ಥ ಸಾರಥಿ ಜೆ. ಪಾಲೆಮಾರ್, ಕೆನರಾ ವಿಕಾಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಸುಗುಣಾ ನಾಯಕ್ ಮತ್ತು ಸಿಬ್ಬಂದಿಗಳು, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಮುಖಂಡರಾದ ಹಿತೇಶ್ ಸ್ವಾಗತಿಸಿದರು. ಅನಂತ್ ವಂದಿಸಿದರು. ವಿದ್ಯಾರ್ಥಿನಿ ಪ್ರಮಿತಿ ನಿರೂಪಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ರೈಲಿನಲ್ಲಿ ಹೆರಿಗೆ ; ಬೋಗಿಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ…!

ಕಾರವಾರ - ಮಂಗಳೂರು- ಬೆಂಗಳೂರು ಮಧ್ಯೆ ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಅದೇ ರೈಲಲ್ಲಿ ಪ್ರಯಾಣಿಸುತ್ತಿದ್ದ ಕೆಲವು…

23 mins ago

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 4ನೇ ತಿರುವಿನಲ್ಲಿ ಭೀಕರ ಬಸ್ ಅಪ*ಘಾತ…!

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಖಾಸಗಿ ಬಸ್ಸೊಂದು ಪಲ್ಟಿಯಾಗಿದ್ದು, ಸುಮಾರು 20ಕ್ಕೂ ಹೆಚ್ಚು…

1 hour ago

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ..!

ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವವು ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ…

2 days ago

ಮಂಗಳೂರು: ದೈವದ ಭಂಡಾರ ಮೆರವಣಿಗೆ ವೇಳೆ ಸಂಕ ಮುರಿದು ಬಿದ್ದು ಅವಘಡ….!

ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಅವಘಡ ಸಂಭವಿಸಿದ್ದು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ದಕ್ಷಿಣ…

2 days ago

ಬಂಟ್ವಾಳ: ಗಡಿಯಾರ ಎಂಬಲ್ಲಿ ವಿದ್ಯುತ್ ತಂತಿ ತಗುಲಿ ಬಾಲಕ ಮೃ*ತ್ಯು….!

ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಮೃತಪಟ್ಟ ಬಾಲಕ.…

2 days ago

ಬಂಟ್ವಾಳ: ಮಹಿಳೆಯರ ಹಕ್ಕುಗಳ ಬಗ್ಗೆ ಬಿಜೆಪಿ ಮೋಸ- ರಮಾನಾಥ ರೈ ಆರೋಪ….!

ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್…

2 days ago