ಸಾನಿಧ್ಯ.. ಐಷಾರಾಮಿ ಬಂಗಲೆ.. ಇದರಲ್ಲಿ ಇದ್ದೋರು ಹಣವಂತರು.. ಅಧಿಕಾರವಂತರು. ಆದ್ರೆ, ಇವರ ಹಣೆಬರಹದಲ್ಲಿ ಸಾವು ಹೀಗೆ ಬರುತ್ತೆ ಅಂತ ಊಹಿಸಿರಲಿಲ್ಲವೇನೋ? ತಮ್ಮ ಕೈಯ್ಯಾರೆ ತಾವೇ ಪ್ರಾಣ ತೆಗೆದುಕೊಂಡಿದ್ದಾರೆ.
ಈ ಸಾನಿಧ್ಯವೀಗ ಸಾವಿನ ಸಾನಿಧ್ಯವಾಗಿ ಕಳಂಕವನ್ನ ಹೊತ್ತಿದೆ. ಇದು ಸಾವಿನ ಮನೆಯ ದುರಂತ ಕಥೆ. ಆ ಮನೆಗೆ ಇರೋ ದೋಷವೋ ಅಥವಾ ದುರ್ಬಲ ಮನಸ್ಥಿತಿಯೋ ಸಾಲು ಸಾಲು ಆತ್ಮಹತ್ಯೆ ನಡೆದುಹೋಗಿದೆ. ಒಂದೇ ಮನೆಯಲ್ಲಿ ಈವರೆಗೂ ನಾಲ್ವರು ಸಾವನ್ನಪ್ಪಿದ್ದಾರೆ. ಅದರಲ್ಲಿ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಆತ್ಮಹತ್ಯೆಗಳು ನಡೆದಿರೋ ಮನೆಗೆ ಭಯದ ಕಂಟಕ ಅಂಟಿದೆ. ಸ್ಥಳೀಯರಲ್ಲಿ ಆತಂಕದ ಛಾಯೆ ಆವರಿಸಿದೆ.
ಶಿವಮೊಗ್ಗದ ಅಶ್ವತ್ ನಗರದ ಸಾನಿಧ್ಯ ನಿವಾಸ.. ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಅವರ ಕುಟುಂಬಕ್ಕೆ ಸೇರಿದ ಭವ್ಯಬಂಗಲೆ.. ಆದ್ರೀಗ ಈ ಮನೆಯ ಬಗ್ಗೆಯೇ ಸುತ್ತ ಮುತ್ತಲ ಜನರಲ್ಲಿ ಭಯವನ್ನ ಹುಟ್ಟಿಸಿದೆ.
ಹೊಮ್ಮರಡಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಕುಟುಂಬದ ದುರಂತ ಕಥೆ ಸತ್ಯಕ್ಕೆ ನಿಲುಕದಾಗಿದೆ. ಇಡೀ ಕುಟುಂಬ ನೆಲೆಸಿದ್ದ `ಸಾನಿಧ್ಯ’ ನಿವಾಸ ಸಾವಿನ ನಿವಾಸವಾಗಿಬಿಟ್ಟಿದೆ. ಇದುವರೆಗೂ ಈ ಮನೆಯಲ್ಲಿ ನಾಲ್ಕು ಸಾವಾಗಿದೆ. ಅದರಲ್ಲೂ ನಾಲ್ವರು ಆತ್ಮಹತ್ಯೆಗೆ ಶರಣಾಗಿರೋದು ಆತಂಕ ಮೂಡಿಸಿದೆ. ಮನೆಯಲ್ಲಿ ಮೊದಲು ಮನೆಯ ಯಜಮಾನ ಡಾ. ನಾಗರಾಜ್ ಹೊಮ್ಮರಡಿ ಆತ್ಮಹತ್ಯೆಗೆ ಶರಣಾಗಿದ್ರಂತೆ. ಇದಾದ ಬಳಿಕ ಕಳೆದ ಒಂದೂವರೆ ವರ್ಷಗಳ ಹಿಂದಷ್ಟೇ ಅವರ ಪುತ್ರ ಆಕಾಶ್ ಪತ್ನಿ ನವಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಘಟನೆ ಮಾಸುವ ಮುನ್ನವೇ ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಹೊಮ್ಮರಡಿ ಮತ್ತು ಅವರ ಪುತ್ರ ಆಕಾಶ್ ಹೊಮ್ಮರಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೂ ಹಿಂದೆ ಈ ಮನೆಯ ಮೂಲ ಮಾಲೀಕರು ಎನ್ನಲಾದ ರಾಜಶೇಖರ್ ಎನ್ನುವವರು ಕೂಡ ಮನೆ ಕಟ್ಟಿದ ಕೆಲವೇ ದಿನಗಳಲ್ಲಿ ಆನಾರೋಗ್ಯಕ್ಕೀಡಾಗಿ ಸಾವನ್ನಪ್ಪಿದ್ದರು ಎನ್ನಲಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…