ಕರಾವಳಿ

ಮಂಗಳೂರು: ಕುಖ್ಯಾತ ಅಂತರ್ ರಾಜ್ಯ ವಾಹನ, ಸರಗಳ್ಳತನ ಆರೋಪಿ ಬಂಧನ!!….

ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನದ ಆರೋಪಿಯನ್ನು ಗುರುವಾರ ಬಂಧಿಸಿರುವ ಕದ್ರಿ ಪೊಲೀಸರು ನಾಲ್ಕು ದ್ವಿಚಕ್ರ ವಾಹನ ಮತ್ತು ಎರಡು ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ. ಕೇರಳದ ತಿರುವನಂತಪುರಂನ ಆದಿತ್ ಗೋಪಾನ್ ಯಾನೆ ಮುತ್ತು ಕೃಷ್ಣ (32) ಬಂಧಿತ ಆರೋಪಿಯಾಗಿದ್ದಾನೆ.

ನ.21ರಂದು ನಗರದ ಕದ್ರಿ ಬಟ್ಟಗುಡ್ಡೆ ಬಳಿ 83 ವರ್ಷ ಪ್ರಾಯದ ವಯೋವೃದ್ಧೆಯೊಬ್ಬರು ತನ್ನ ಮನೆಯ ಬಳಿ ಓಣಿಯಲ್ಲಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಚಿನ್ನದ ಸರವನ್ನು ಕಸಿದುಕೊಂಡು ಹೋಗಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿ ಪತ್ತೆ ಬಗ್ಗೆ ವಿಶೇಷ ತಂಡವನ್ನು ರಚಿಸಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು, ಡಿ. 04 ರಂದು ಆರೋಪಿಯ ಬಗ್ಗೆ ವಿಶೇಷ ತಂಡಕ್ಕೆ ದೊರೆತ ಮಾಹಿತಿಯಂತೆ ಕದ್ರಿ ಜೋಗಿ ಮಠದ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ಸಮಯ ಸಂಶಯಾಸ್ಪದವಾಗಿ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬಂದ ವ್ಯಕ್ತಿಯನ್ನು ನಿಲ್ಲಿಸಿ ಪರಿಶೀಲಿಸಿದ್ದಾರೆ. ಆಗ ಈ ವಾಹನವು ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಕಳವು ಮಾಡಿದ ವಾಹನವಾಗಿದ್ದು, ವಿಚಾರಿಸಿದಾಗ ಆರೋಪಿಯು ಕಳ್ಳತನ ಮಾಡಿದ ದ್ವಿಚಕ್ರ ವಾಹನವನ್ನು ಬಳಸಿಕೊಂಡು ವಯೋವೃದ್ದರು, ಒಂಟಿ ಮಹಿಳೆಯರನ್ನು ಗುರುತಿಸಿ ಸರಗಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಮುಂದಿನ ತನಿಖೆಗಾಗಿ 3 ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಯಿಂದ 4 ದ್ವಿಚಕ್ರ ವಾಹನ ಮತ್ತು ಚಿನ್ನಾಭರಣ ಸಮೇತ 5 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…

2 hours ago

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

ಬೆಂಗಳೂರಿನಲ್ಲಿ 'ಸೇಫ್ ಫುಟ್‌ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗಗಳ…

2 hours ago

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್‌ನ ಭೂಗತ ಬಂಕರ್‌ಗಳು…

2 hours ago

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…

22 hours ago

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…

23 hours ago

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…

23 hours ago