ಗ್ಯಾಸ್ ಗೀಸರ್ ಸೋರಿಕೆಯಿಂದ ನವ ವಿವಾಹಿತೆ ಸಾ*ವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ನಡೆದಿದೆ.

24 ವರ್ಷದ ಭೂಮಿಕಾ ಮೃ*ತ ದುರ್ದೈವಿ. ಭೂಮಿಕಾ ಹಾಸನ ಮೂಲದವರಾಗಿದ್ದು ನಾಲ್ಕು ತಿಂಗಳ ಹಿಂದಷ್ಟೇ ಕೃಷ್ಣಮೂರ್ತಿ ಎಂಬುವವರ ಜೊತೆ ಮದುವೆಯಾಗಿದ್ದರು. ಪತಿ ಕೆಲಸಕ್ಕೆ ಹೋದ ಬಳಿಕ ಭೂಮಿಕಾ ಸ್ನಾನಕ್ಕೆ ಹೋಗಿದ್ದು ಗ್ಯಾಸ್ ಲೀಕ್ ಆಗಿ ಭೂಮಿಕಾಗೆ ಉಸಿರುಗಟ್ಟಿದೆ, ಈ ಹಿನ್ನಲೆ ಬಾತ್ ರೂಂನಲ್ಲೇ ಕೊನೆಯು*ಸಿರೆಳೆದಿದ್ದಾಳೆ. ಪತಿ ಕೆಲಸ ಮುಗಿಸಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



