ರೋಟರಿ ಕ್ಲಬ್ನ ವಲಯ 4ರ ಮಾಜಿ ಸಹಾಯಕ ಗವರ್ನರ್, ಜಿಲ್ಲಾ ಕಾರ್ಯದರ್ಶಿ ಹಾಗೂ ಬಂಟ್ವಾಳ ರೋಟರಿ ಕ್ಲಬ್ ಪೂರ್ವಾಧ್ಯಕ್ಷರಾಗಿದ್ದ ವಿಜಯಾ ಬ್ಯಾಂಕ್ ನ ನಿವೃತ್ತ ಸಿಬ್ಬಂದಿ ಎಂ.ರಾಮಣ್ಣ ರೈ ಅಲ್ಪಕಾಲದ ಅಸೌಖ್ಯದಿಂದ ಬಂಟ್ವಾಳ ತಾಲೂಕಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಪತ್ನಿ, ಇಬ್ಬರು ಪುತ್ರಿಯರನ್ನು ಹೊಂದಿದ್ದು, ಮೂಲತಃ ಅಂಬಾಬೀಡು ಮನೆಯವರಾಗಿದ್ದರು. ಪ್ರಸ್ತುತ ಮಾವಂತೂರುಗುತ್ತಿನಲ್ಲಿ ನೆಲೆಸಿದ್ದ ಅವರು, ಬಂಟ್ವಾಳ ರೋಟರಿ ಕ್ಲಬ್ ನ ಪೂರ್ವಾಧ್ಯಕ್ಷರಾಗಿ, ವಲಯ ನಾಲ್ಕರ ಸಹಾಯಕ ಗವರ್ನರ್, 2023ರಲ್ಲಿ ಜಿಲ್ಲಾ ಕಾರ್ಯದರ್ಶಿಯಾಗಿ ರೋಟರಿ ಕ್ಲಬ್ನಲ್ಲಿ ಸುಮಾರು ನಲ್ವತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ವಿಜಯಾ ಬ್ಯಾಂಕ್ನಲ್ಲಿ ಸುದೀರ್ಘ ಅವಧಿಯಲ್ಲಿ ವಿವಿಧ ಶಾಖೆಗಳಲ್ಲಿ ಕಾರ್ಯನಿರ್ವಹಿಸಿದ್ದ ಅವರು ಬಂಟರ ಮಾತೃಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದು, ಬಂಟ್ವಾಳ ಬಂಟರ ಸಂಘದಲ್ಲೂ ಸಕ್ರಿಯರಾಗಿದ್ದರು. ಸಾಮಾಜಿಕವಾಗಿ ಹಲವು ಸಂಘ, ಸಂಸ್ಥೆಗಳಲ್ಲಿ ರಾಮಣ್ಣ ರೈ ಅವರು ಸಕ್ರಿಯರಾಗಿದ್ದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…