ಕಾರ್ಕಳ: ಲಿಟ್ಸ್ ಏಂಜಲ್ಸ್ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ, ನಂದಳಿಕೆ ಗ್ರಾಮದ ಡಾ.ಪಿ.ಕೆ.ಶೆಟ್ಟಿ (78) ಅವರು ಮುಂಬೈನ ಸ್ವಗೃಹದಲ್ಲಿ ನಿಧನ ಹೊಂದಿದರು. ಮುಂಬೈಯ ಪಾನ್ಬೈ ಇಂಟರ್ನ್ಯಾಷನಲ್ ಸ್ಕೂಲ್, ಲಿಟ್ಸ್ ಏಂಜಲ್ಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮುಂಬೈ, ರೆ. ಸಿ. ಎಫ್. ಆಂಡೋ ಇಂಗ್ಲೀಷ್ ಸ್ಕೂಲ್ ಮುಂಬೈ ಇದರ ಸಂಚಾಲಕರಾಗಿರುವ ಮೂಲತಃ ನಂದಳಿಕೆಯವರಾದ ಡಾ.ಪಿ.ಕೆ.ಶೆಟ್ಟಿ ತನ್ನೂರಿನಲ್ಲಿ ಸಿಬಿಎಸ್ಇ ಶಾಲಾ ತೆರೆಯಬೇಕೆಂಬ ನಿಟ್ಟಿನಲ್ಲಿ 2004ರಲ್ಲಿ ಕಾರ್ಕಳ ತಾಲೂಕಿನ ಬೆಳಣ್ನಲ್ಲಿ ಲಿಟ್ಸ್ ಏಂಜಲ್ಸ್ ಸ್ಕೂಲ್ ಪ್ರಾರಂಭಿಸಿದ್ದರು. ತದನಂತರ 2005ರಲ್ಲಿ ಶ್ರೀ ಲಕ್ಷ್ಮೀ ಜನಾರ್ದನ ಇಂಟರ್ ನ್ಯಾಷನಲ್ ಸ್ಕೂಲ್ ಪ್ರಾರಂಭಿಸಿದ್ದರು. ಶೈಕ್ಷಣಿಕ ಮಾತ್ರವಲ್ಲದೇ ಪಿ. ಕೆ.ಶೆಟ್ಟಿ ಅವರು ನಂದಳಿಕೆ ಲಕ್ಷ್ಮೀ ಜನಾರ್ದನ ದೇವಸ್ಥಾನದ ಟ್ರಸ್ಟಿಯಾಗಿ, ಮುಂಬೈ ಬಂಟ್ಸ್ ಸಂಘದ ಪದಾಧಿಕಾರಿಯಾಗಿ ತೊಡಗಿಸಿಕೊಂಡಿದ್ದರು.
ಮೃತರು ಪತ್ನಿ ಮೋಹಿನಿ ಶೆಟ್ಟಿ, ಪುತ್ರರಾದ ಮಯೂರ್ ಕುಮಾರ್ ಶೆಟ್ಟಿ, ಪಿಯೂಷ್ ಶೆಟ್ಟಿ, ವರುಣ್ ಶೆಟ್ಟಿ ಅವರನ್ನು ಅಗಲಿದ್ದಾರೆ. ಡಾ.ಪಿ. ಕೆ.ಶೆಟ್ಟಿ ನಿಧನಕ್ಕೆ ಮಾಜಿ ಸಚಿವ, ಶಾಸಕ ವಿ. ಸುನಿಲ್ ಕುಮಾರ್ ಸಂತಾಪ ಸೂಚಿಸಿದ್ದಾರೆ. ಡಾ. ಪಿ.ಕೆ.ಶೆಟ್ಟಿ ಅವರು ಮುಂಬೈ ಮತ್ತು ಹುಟ್ಟೂರಿನಲ್ಲಿ ಶಾಲೆಗಳನ್ನು ಸ್ಥಾಪಿಸಿ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದವರು. ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ. ಅವರ ಅಗಲಿಕೆಯಿಂದ ಕಾರ್ಕಳ ಓರ್ವ ಶೈಕ್ಷಣಿಕ ಹರಿಕಾರನನ್ನು ಕಳೆದುಕೊಂಡಿದೆ ಎಂದು ಶೋಕ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…