ಕಾರ್ಕಳ: ಲಿಟ್ಸ್ ಏಂಜಲ್ಸ್ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ, ನಂದಳಿಕೆ ಗ್ರಾಮದ ಡಾ.ಪಿ.ಕೆ.ಶೆಟ್ಟಿ (78) ಅವರು ಮುಂಬೈನ ಸ್ವಗೃಹದಲ್ಲಿ ನಿಧನ ಹೊಂದಿದರು. ಮುಂಬೈಯ ಪಾನ್ಬೈ ಇಂಟರ್ನ್ಯಾಷನಲ್ ಸ್ಕೂಲ್, ಲಿಟ್ಸ್ ಏಂಜಲ್ಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮುಂಬೈ, ರೆ. ಸಿ. ಎಫ್. ಆಂಡೋ ಇಂಗ್ಲೀಷ್ ಸ್ಕೂಲ್ ಮುಂಬೈ ಇದರ ಸಂಚಾಲಕರಾಗಿರುವ ಮೂಲತಃ ನಂದಳಿಕೆಯವರಾದ ಡಾ.ಪಿ.ಕೆ.ಶೆಟ್ಟಿ ತನ್ನೂರಿನಲ್ಲಿ ಸಿಬಿಎಸ್ಇ ಶಾಲಾ ತೆರೆಯಬೇಕೆಂಬ ನಿಟ್ಟಿನಲ್ಲಿ 2004ರಲ್ಲಿ ಕಾರ್ಕಳ ತಾಲೂಕಿನ ಬೆಳಣ್ನಲ್ಲಿ ಲಿಟ್ಸ್ ಏಂಜಲ್ಸ್ ಸ್ಕೂಲ್ ಪ್ರಾರಂಭಿಸಿದ್ದರು. ತದನಂತರ 2005ರಲ್ಲಿ ಶ್ರೀ ಲಕ್ಷ್ಮೀ ಜನಾರ್ದನ ಇಂಟರ್ ನ್ಯಾಷನಲ್ ಸ್ಕೂಲ್ ಪ್ರಾರಂಭಿಸಿದ್ದರು. ಶೈಕ್ಷಣಿಕ ಮಾತ್ರವಲ್ಲದೇ ಪಿ. ಕೆ.ಶೆಟ್ಟಿ ಅವರು ನಂದಳಿಕೆ ಲಕ್ಷ್ಮೀ ಜನಾರ್ದನ ದೇವಸ್ಥಾನದ ಟ್ರಸ್ಟಿಯಾಗಿ, ಮುಂಬೈ ಬಂಟ್ಸ್ ಸಂಘದ ಪದಾಧಿಕಾರಿಯಾಗಿ ತೊಡಗಿಸಿಕೊಂಡಿದ್ದರು.
ಮೃತರು ಪತ್ನಿ ಮೋಹಿನಿ ಶೆಟ್ಟಿ, ಪುತ್ರರಾದ ಮಯೂರ್ ಕುಮಾರ್ ಶೆಟ್ಟಿ, ಪಿಯೂಷ್ ಶೆಟ್ಟಿ, ವರುಣ್ ಶೆಟ್ಟಿ ಅವರನ್ನು ಅಗಲಿದ್ದಾರೆ. ಡಾ.ಪಿ. ಕೆ.ಶೆಟ್ಟಿ ನಿಧನಕ್ಕೆ ಮಾಜಿ ಸಚಿವ, ಶಾಸಕ ವಿ. ಸುನಿಲ್ ಕುಮಾರ್ ಸಂತಾಪ ಸೂಚಿಸಿದ್ದಾರೆ. ಡಾ. ಪಿ.ಕೆ.ಶೆಟ್ಟಿ ಅವರು ಮುಂಬೈ ಮತ್ತು ಹುಟ್ಟೂರಿನಲ್ಲಿ ಶಾಲೆಗಳನ್ನು ಸ್ಥಾಪಿಸಿ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದವರು. ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ. ಅವರ ಅಗಲಿಕೆಯಿಂದ ಕಾರ್ಕಳ ಓರ್ವ ಶೈಕ್ಷಣಿಕ ಹರಿಕಾರನನ್ನು ಕಳೆದುಕೊಂಡಿದೆ ಎಂದು ಶೋಕ ವ್ಯಕ್ತಪಡಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…