ಕಾರ್ಕಳ: ಲಿಟ್ಸ್ ಏಂಜಲ್ಸ್ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ, ನಂದಳಿಕೆ ಗ್ರಾಮದ ಡಾ.ಪಿ.ಕೆ.ಶೆಟ್ಟಿ (78) ಅವರು ಮುಂಬೈನ ಸ್ವಗೃಹದಲ್ಲಿ ನಿಧನ ಹೊಂದಿದರು. ಮುಂಬೈಯ ಪಾನ್ಬೈ ಇಂಟರ್ನ್ಯಾಷನಲ್ ಸ್ಕೂಲ್, ಲಿಟ್ಸ್ ಏಂಜಲ್ಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮುಂಬೈ, ರೆ. ಸಿ. ಎಫ್. ಆಂಡೋ ಇಂಗ್ಲೀಷ್ ಸ್ಕೂಲ್ ಮುಂಬೈ ಇದರ ಸಂಚಾಲಕರಾಗಿರುವ ಮೂಲತಃ ನಂದಳಿಕೆಯವರಾದ ಡಾ.ಪಿ.ಕೆ.ಶೆಟ್ಟಿ ತನ್ನೂರಿನಲ್ಲಿ ಸಿಬಿಎಸ್ಇ ಶಾಲಾ ತೆರೆಯಬೇಕೆಂಬ ನಿಟ್ಟಿನಲ್ಲಿ 2004ರಲ್ಲಿ ಕಾರ್ಕಳ ತಾಲೂಕಿನ ಬೆಳಣ್ನಲ್ಲಿ ಲಿಟ್ಸ್ ಏಂಜಲ್ಸ್ ಸ್ಕೂಲ್ ಪ್ರಾರಂಭಿಸಿದ್ದರು. ತದನಂತರ 2005ರಲ್ಲಿ ಶ್ರೀ ಲಕ್ಷ್ಮೀ ಜನಾರ್ದನ ಇಂಟರ್ ನ್ಯಾಷನಲ್ ಸ್ಕೂಲ್ ಪ್ರಾರಂಭಿಸಿದ್ದರು. ಶೈಕ್ಷಣಿಕ ಮಾತ್ರವಲ್ಲದೇ ಪಿ. ಕೆ.ಶೆಟ್ಟಿ ಅವರು ನಂದಳಿಕೆ ಲಕ್ಷ್ಮೀ ಜನಾರ್ದನ ದೇವಸ್ಥಾನದ ಟ್ರಸ್ಟಿಯಾಗಿ, ಮುಂಬೈ ಬಂಟ್ಸ್ ಸಂಘದ ಪದಾಧಿಕಾರಿಯಾಗಿ ತೊಡಗಿಸಿಕೊಂಡಿದ್ದರು.
ಮೃತರು ಪತ್ನಿ ಮೋಹಿನಿ ಶೆಟ್ಟಿ, ಪುತ್ರರಾದ ಮಯೂರ್ ಕುಮಾರ್ ಶೆಟ್ಟಿ, ಪಿಯೂಷ್ ಶೆಟ್ಟಿ, ವರುಣ್ ಶೆಟ್ಟಿ ಅವರನ್ನು ಅಗಲಿದ್ದಾರೆ. ಡಾ.ಪಿ. ಕೆ.ಶೆಟ್ಟಿ ನಿಧನಕ್ಕೆ ಮಾಜಿ ಸಚಿವ, ಶಾಸಕ ವಿ. ಸುನಿಲ್ ಕುಮಾರ್ ಸಂತಾಪ ಸೂಚಿಸಿದ್ದಾರೆ. ಡಾ. ಪಿ.ಕೆ.ಶೆಟ್ಟಿ ಅವರು ಮುಂಬೈ ಮತ್ತು ಹುಟ್ಟೂರಿನಲ್ಲಿ ಶಾಲೆಗಳನ್ನು ಸ್ಥಾಪಿಸಿ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದವರು. ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ. ಅವರ ಅಗಲಿಕೆಯಿಂದ ಕಾರ್ಕಳ ಓರ್ವ ಶೈಕ್ಷಣಿಕ ಹರಿಕಾರನನ್ನು ಕಳೆದುಕೊಂಡಿದೆ ಎಂದು ಶೋಕ ವ್ಯಕ್ತಪಡಿಸಿದ್ದಾರೆ.
ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವವು ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ…
ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಅವಘಡ ಸಂಭವಿಸಿದ್ದು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ದಕ್ಷಿಣ…
ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಮೃತಪಟ್ಟ ಬಾಲಕ.…
ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್…
ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ ಕಟೀಲು ಇಲ್ಲಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 35 ವಿದ್ಯಾರ್ಥಿಗಳು ಹಾಜರಾಗಿದ್ದು,ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ…
ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ…