ಅಂತಾರಾಜ್ಯಗಳಲ್ಲಿ ವಾಹನ ಹಾಗೂ ಸರಗಳ್ಳತನ ನಡೆಸಿದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.
ಪೈಸಲ್ ಮತ್ತು ನಿತೀನ್ ಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳಿಂದ ಸುಮಾರು 1,20,000 ರೂ. ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಿಸಿದ 45 ಸಾವಿರ ರೂ. ಮೌಲ್ಯದ ಬೈಕನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡಿ.12ರಂದು ಯೆಯ್ಯಾಡಿಯ ಕಾಂಪ್ಲೆಕ್ಸೊಂದರ ಪಾರ್ಕಿಂಗ್ ಬಳಿ ನಿಲ್ಲಿಸಿದ್ದ ಬೈಕ್ ಕಳವು ಆಗಿರುವ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ಕದ್ರಿ ಅಪರಾಧ ವಿಭಾಗದ ಸಿಬ್ಬಂದಿಗೆ ದೊರೆತ ಖಚಿತ ಮಾಹಿತಿಯಂತೆ ಡಿ.16ರಂದು ಪ್ರಕರಣದ ಪ್ರಮುಖ ಆರೋಪಿ ಪೈಸಲ್ ಅಲಿಯಾಸ್ ತೋಟ ಪೈಸಲ್ ಮತ್ತು ನಿತೀನ್ ಕುಮಾರ್ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆರೋಪಿಗಳು ಡಿ.13ರಂದು ಭಟ್ಕಳ ಗ್ರಾಮಿಣ ಪೊಲೀಸ್ ಠಾಣಾ ಸರಹದ್ದಿನ ಗರ್ಡಿ ಹಿತ್ಲು ಬೆಳಕೆ ಎಂಬಲ್ಲಿ ವಯೋವೃದ್ಧೆ ಹೊನ್ನಮ್ಮ ಮಹಾದೇವ ನಾಯ್ಕ್ ಎಂಬವರ ಕುತ್ತಿಗೆಯಿಂದ ಚಿನ್ನದ ಚೈನ್ನ್ನು ಕಸಿದುಕೊಂಡು ಪರಾರಿಯಾದ ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಬಾಯಿ ಬಿಟ್ಟಿದ್ದಾರೆ. ಆರೋಪಿಗಳಿಂದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ ಬೈಕನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಆರೋಪಿಗಳ ವಿರುದ್ಧ ಈಗಾಗಲೇ ವಿವಿಧ ಠಾಣೆಗಳಲ್ಲಿ ಪ್ರಕರಣ ಈಗಾಗಲೇ ದಾಖಲಾಗಿತ್ತು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…