ರೈಲು ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುವ ವೇಳೆ ಅಡಿಭಾಗ ಕುಸಿದು ಕ್ರೇನ್ ರೈಲು ಹಳಿಗೆ ಉರುಳಿ ಬಿದ್ದ ಘಟನೆ ಕಡಬ ತಾಲೂಕಿನ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಸಂಭವಿಸಿದೆ.
ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಕ್ರೇನ್ ಪ್ಲಾಟ್ ಫಾರ್ಮ್ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಉರುಳಿ ರೈಲು ಹಳಿ ಮೇಲೆ ಅಡ್ಡಲಾಗಿ ಬಿದ್ದಿದೆ. ಪ್ಲಾಟ್ ಫಾರ್ಮ್ನ ಸೈಡ್ನಲ್ಲಿದ್ದ ಕ್ರೇನ್ ಪ್ಲಾಟ್ ಫಾರ್ಮ್ನ ಬದಿ ಕುಸಿದ ಪರಿಣಾಮ ನಿಯಂತ್ರಣ ತಪ್ಪಿ ರೈಲು ಹಳಿಗೆ ಉರುಳಿ ಬಿದ್ದಿದೆ ಎನ್ನಲಾಗಿದೆ. ಘಟನೆಯಲ್ಲಿ ಕ್ರೇನ್ ಆಪರೇಟರ್ ಸ್ವಲ್ಪ ಗಾಯಗೊಂಡಿದ್ದಾರೆ.
ಬಳಿಕ ಎರಡು ಕ್ರೇನ್ ಗಳ ಮೂಲಕ ಕಾರ್ಯಾಚರಣೆ ನಡೆಸಿ ರೈಲು ಹಳಿಯಿಂದ ಉರುಳಿ ಬಿದ್ದ ಕ್ರೇನ್ ಅನ್ನು ಮೇಲೆತ್ತಿ ತೆರವು ಮಾಡಲಾಯಿತು. ನಿಲ್ದಾಣದಲ್ಲಿ ರೈಲು ವಿದ್ಯುತ್ ಮಾರ್ಗ ಹಾದು ಹೋಗಿದ್ದು, ನಿಲ್ದಾಣದಲ್ಲಿ ಇತರೆ ರೈಲು, ಗೂಡ್ಸ್ ವಾಹನ ಇಲ್ಲದೇ ಇದ್ದುದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಸಮರ್ಪಕ ಕಾಮಗಾರಿಗೆ ರೈಲು ಬಳಕೆದಾರರು ಒತ್ತಾಯಿಸಿದ್ದಾರೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…