ಜನ ಮನದ ನಾಡಿ ಮಿಡಿತ

Advertisement

ಕಡಬ: ಡಿ. 20, 21ರಂದು ಕೇಪುವಿನಲ್ಲಿ ಕಡಬ ತಾಲೂಕು ತುಳು ಸಮ್ಮೇಳನ….!

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ನೇತ್ರಾವತಿ ತುಳು ಕೂಟ ರಾಮಕುಂಜ, ನೂಜಿಬಾಳ್ತಿಲ ತೆಗ್ ತುಳು ಕೂಟ ಆಶ್ರಯದಲ್ಲಿ ಕಡಬ ತಾಲೂಕು ಪ್ರಥಮ ತುಳು ಸಮ್ಮೇಳನ ಕೇಪು ದೇವಸ್ಥಾನದ ಸಭಾಂಗಣದಲ್ಲಿ ಡಿ. 20, 21ರಂದು ನಡೆಯಲಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಶಿವರಾಮ ಶೆಟ್ಟಿ ಕೇಪು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮ್ಮೇಳನಾಧ್ಯಕ್ಷರಾಗಿ ಕೆ.ಸೇಸಪ್ಪ ರೈ ರಾಮಕುಂಜ ಆಯ್ಕೆಯಾಗಿದ್ದಾರೆ. ತುಳು ಭಾಷೆಯನ್ನು ಬೆಳೆಸಲು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕೆನ್ನುವ ಹಕ್ಕೊತ್ತಾಯವನ್ನು ಮಂಡಿಸುವ ಉದ್ದೇಶದೊಂದಿಗೆ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದಿದ್ದಾರೆ. ತುಳುನಾಡಿನಲ್ಲಿ ಹಾಸುಹೊಕ್ಕಾಗಿರುವ ವಿವಿಧ ಆಚರಣೆಗಳು, ಹಾಡು, ಕುಣಿತ, ಭಜನೆ ಮುಂತಾದ ಸ್ಪರ್ಧೆಗಳನ್ನು ಕಾಣಿಯೂರು, ನೂಜಿಬಾಳ್ತಿಲ, ರಾಮಕುಂಜ, ಸವಣೂರು ಭಾಗಗಳಲ್ಲಿ ನಡೆಸಿ ಡಿ. 20ರಂದು ಸಮ್ಮೇಳನದ ಕಾರ್ಯಕ್ರಮಗಳಿಗೆ ಅಧಿಕೃತ ಚಾಲನೆ ದೊರೆಯಲಿದೆ. ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಬಳಿಯಿಂದ ಮೆರವಣಿಗೆ ಹೊರಟು ಕೇಪು ದೇವಸ್ಥಾನದಲ್ಲಿ ಸಮಾಪನಗೊಳ್ಳಲಿದೆ. ಕಡಬ ಪ.ಪಂ. ಅಧ್ಯಕ್ಷೆ ತಮನ್ನಾ ಜಬಿನ್ ಮೆರವಣಿಗೆ ಉದ್ಘಾಟಿಸಲಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಸಮಿತಿ ಸಂಚಾಲಕ ಉಮೇಶ್ ಶೆಟ್ಟಿ ಸಾಯಿರಾಂ, ಪ್ರಧಾನ ಕಾರ್ಯದರ್ಶಿ ಗಿರಿಶಂಕರ ಸುಲಾಯ, ಕಾರ್ಯದರ್ಶಿ ಕಿಶೋರ್ ಕುಮಾರ್ ಬಿ., ಜತೆ ಕಾರ್ಯದರ್ಶಿ ಪ್ರೇಮಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!