ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ನೇತ್ರಾವತಿ ತುಳು ಕೂಟ ರಾಮಕುಂಜ, ನೂಜಿಬಾಳ್ತಿಲ ತೆಗ್ ತುಳು ಕೂಟ ಆಶ್ರಯದಲ್ಲಿ ಕಡಬ ತಾಲೂಕು ಪ್ರಥಮ ತುಳು ಸಮ್ಮೇಳನ ಕೇಪು ದೇವಸ್ಥಾನದ ಸಭಾಂಗಣದಲ್ಲಿ ಡಿ. 20, 21ರಂದು ನಡೆಯಲಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಶಿವರಾಮ ಶೆಟ್ಟಿ ಕೇಪು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮ್ಮೇಳನಾಧ್ಯಕ್ಷರಾಗಿ ಕೆ.ಸೇಸಪ್ಪ ರೈ ರಾಮಕುಂಜ ಆಯ್ಕೆಯಾಗಿದ್ದಾರೆ. ತುಳು ಭಾಷೆಯನ್ನು ಬೆಳೆಸಲು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕೆನ್ನುವ ಹಕ್ಕೊತ್ತಾಯವನ್ನು ಮಂಡಿಸುವ ಉದ್ದೇಶದೊಂದಿಗೆ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದಿದ್ದಾರೆ. ತುಳುನಾಡಿನಲ್ಲಿ ಹಾಸುಹೊಕ್ಕಾಗಿರುವ ವಿವಿಧ ಆಚರಣೆಗಳು, ಹಾಡು, ಕುಣಿತ, ಭಜನೆ ಮುಂತಾದ ಸ್ಪರ್ಧೆಗಳನ್ನು ಕಾಣಿಯೂರು, ನೂಜಿಬಾಳ್ತಿಲ, ರಾಮಕುಂಜ, ಸವಣೂರು ಭಾಗಗಳಲ್ಲಿ ನಡೆಸಿ ಡಿ. 20ರಂದು ಸಮ್ಮೇಳನದ ಕಾರ್ಯಕ್ರಮಗಳಿಗೆ ಅಧಿಕೃತ ಚಾಲನೆ ದೊರೆಯಲಿದೆ. ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಬಳಿಯಿಂದ ಮೆರವಣಿಗೆ ಹೊರಟು ಕೇಪು ದೇವಸ್ಥಾನದಲ್ಲಿ ಸಮಾಪನಗೊಳ್ಳಲಿದೆ. ಕಡಬ ಪ.ಪಂ. ಅಧ್ಯಕ್ಷೆ ತಮನ್ನಾ ಜಬಿನ್ ಮೆರವಣಿಗೆ ಉದ್ಘಾಟಿಸಲಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಸಮಿತಿ ಸಂಚಾಲಕ ಉಮೇಶ್ ಶೆಟ್ಟಿ ಸಾಯಿರಾಂ, ಪ್ರಧಾನ ಕಾರ್ಯದರ್ಶಿ ಗಿರಿಶಂಕರ ಸುಲಾಯ, ಕಾರ್ಯದರ್ಶಿ ಕಿಶೋರ್ ಕುಮಾರ್ ಬಿ., ಜತೆ ಕಾರ್ಯದರ್ಶಿ ಪ್ರೇಮಾ ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…