ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ನೇತ್ರಾವತಿ ತುಳು ಕೂಟ ರಾಮಕುಂಜ, ನೂಜಿಬಾಳ್ತಿಲ ತೆಗ್ ತುಳು ಕೂಟ ಆಶ್ರಯದಲ್ಲಿ ಕಡಬ ತಾಲೂಕು ಪ್ರಥಮ ತುಳು ಸಮ್ಮೇಳನ ಕೇಪು ದೇವಸ್ಥಾನದ ಸಭಾಂಗಣದಲ್ಲಿ ಡಿ. 20, 21ರಂದು ನಡೆಯಲಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಶಿವರಾಮ ಶೆಟ್ಟಿ ಕೇಪು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮ್ಮೇಳನಾಧ್ಯಕ್ಷರಾಗಿ ಕೆ.ಸೇಸಪ್ಪ ರೈ ರಾಮಕುಂಜ ಆಯ್ಕೆಯಾಗಿದ್ದಾರೆ. ತುಳು ಭಾಷೆಯನ್ನು ಬೆಳೆಸಲು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕೆನ್ನುವ ಹಕ್ಕೊತ್ತಾಯವನ್ನು ಮಂಡಿಸುವ ಉದ್ದೇಶದೊಂದಿಗೆ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದಿದ್ದಾರೆ. ತುಳುನಾಡಿನಲ್ಲಿ ಹಾಸುಹೊಕ್ಕಾಗಿರುವ ವಿವಿಧ ಆಚರಣೆಗಳು, ಹಾಡು, ಕುಣಿತ, ಭಜನೆ ಮುಂತಾದ ಸ್ಪರ್ಧೆಗಳನ್ನು ಕಾಣಿಯೂರು, ನೂಜಿಬಾಳ್ತಿಲ, ರಾಮಕುಂಜ, ಸವಣೂರು ಭಾಗಗಳಲ್ಲಿ ನಡೆಸಿ ಡಿ. 20ರಂದು ಸಮ್ಮೇಳನದ ಕಾರ್ಯಕ್ರಮಗಳಿಗೆ ಅಧಿಕೃತ ಚಾಲನೆ ದೊರೆಯಲಿದೆ. ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಬಳಿಯಿಂದ ಮೆರವಣಿಗೆ ಹೊರಟು ಕೇಪು ದೇವಸ್ಥಾನದಲ್ಲಿ ಸಮಾಪನಗೊಳ್ಳಲಿದೆ. ಕಡಬ ಪ.ಪಂ. ಅಧ್ಯಕ್ಷೆ ತಮನ್ನಾ ಜಬಿನ್ ಮೆರವಣಿಗೆ ಉದ್ಘಾಟಿಸಲಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಸಮಿತಿ ಸಂಚಾಲಕ ಉಮೇಶ್ ಶೆಟ್ಟಿ ಸಾಯಿರಾಂ, ಪ್ರಧಾನ ಕಾರ್ಯದರ್ಶಿ ಗಿರಿಶಂಕರ ಸುಲಾಯ, ಕಾರ್ಯದರ್ಶಿ ಕಿಶೋರ್ ಕುಮಾರ್ ಬಿ., ಜತೆ ಕಾರ್ಯದರ್ಶಿ ಪ್ರೇಮಾ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…