ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಬಜಪೆಯ ತಾರಿಕಂಬಳ ಬಂಟರ ಸಂಘದ ನಿವೇಶನದಲ್ಲಿ ಪಾಲ್ದಟ್ಟೆಡ್ ಬಂಟೆರೆ ಪರ್ಬ-2025..!

ಪಾಲ್ದಟ್ಟೆಡ್ ಬಂಟೆರೆ ಪರ್ಬ-2025 ಕಾರ್ಯಕ್ರಮವು ಡಿಸೆಂಬರ್ 28, ರವಿವಾರ ಬಂಟರ ಸಂಘ ಬಜಪೆ ವಲಯದ ಆಶ್ರಯದಲ್ಲಿ ನಡೆಯಲಿದೆ.

ಈ ಕ್ರಾಯಕ್ರಮದಲ್ಲಿ ನೂತನ ಅಧ್ಯಕ್ಷರ ಪದಗ್ರಹಣ, ಬಂಟರ ಸಂಘಗಳ ಸಾಂಸ್ಕೃತಿಕ ಸ್ಪರ್ಧೆ, ಗೌರವ ಅಭಿನಂದನೆ, ವಿದ್ಯಾನಿಧಿಯ ಉದ್ಘಾಟನೆ, ಆರ್ಥಿಕ ಸಹಾಯಧನ ವಿತರಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮ ಬಜಪೆಯ ತಾರಿಕಂಬಳ ಬಂಟರ ಸಂಘದ ನಿವೇಶನದಲ್ಲಿ ನಡೆಯಲಿರುವುದು ಎಂದು ಸಂಘದ ಉಪಾಧ್ಯಕ್ಷರಾದ ಸುಕೇಶ್ ಶೆಟ್ಟಿ ಮುಂಡಾರುಗುತ್ತು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿದ ಅವರು, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ದೀಪ ಪ್ರಜ್ವಲನೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಮಂಗಳೂರು ಇದರ ಅಧ್ಯಕ್ಷರಾದ ಅಜಿತ್ ಕುಮಾರ್ ರೈ ಮಾಲಾಡಿ ನೆರವೇರಿಸಲಿದ್ದು, ಬಂಟರ ಸಂಘ (ರಿ.) ಬಜಪೆ ವಲಯ ಅಧ್ಯಕ್ಷರಾದ ಬಾಬು ಶೆಟ್ಟಿ ಪೆರಾರ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸಂಜೆ ಸಮರೋಪ ಸಮಾರಂಭ ನಡೆಯಲಿದ್ದು ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಹೇರಂಬಾ ಇಂಡಸ್ಟ್ರೀಸ್ ಲಿಮಿಟೆಡ್, ಮುಂಬಯಿ ಇದರ ಆಡಳಿತ ನಿರ್ದೇಶಕರಾದ ಡಾ| ಕನ್ಯಾನ ಸದಾಶಿವ ಶೆಟ್ಟಿ ನೆರವೇಲಿಸಲಿದ್ದು, ಕಾರ್ಯಕ್ರಮದ ಉದ್ಘಾಟಕರಾಗಿ ಭವಾನಿ ಶಿಪ್ಪಿಂಗ್ ಕಾರ್ಪೊರೇಷನ್ ಲಿಮಿಟೆಡ್ ಮುಂಬೈ ಇದರ ಆಡಳಿತ ನಿರ್ದೇಶಕರಾದ ಕುಸುಮಾಧರ ಡಿ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಮಾಹಿತಿಯನ್ನು ನೀಡಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಅಜಿತ್ ಕುಮಾರ್ ಶೆಟ್ಟಿ, ಸದಸ್ಯರಾದ ಹರೀಶ್ ಶೆಟ್ಟಿ, ಭರತ್ ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!