ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಶಾಸಕ ಅಶೋಕ್ ರೈ ಬ್ಯಾನರ್ ಗೆ ಹಾನಿ ; ಆರೋಪಿಗಳನ್ನು ಬಂಧಿಸಿ ಎಂದು ಯುವಕಾಂಗ್ರೆಸ್ ನಿಂದ ಪೋಲೀಸರಿಗೆ ಮನವಿ

ನರಿಮೊಗರು ಗ್ರಾಮದ ಶಿಬರ ನಡುವಾಲ್ ಎಂಬಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಅಭಿನಂದನೆ ಕೋರಿ ಹಾಕಲಾದ ಬ್ಯಾನರ್‌ಗೆ ಕಿಡಿಗೇಡಿಗಳು ಹಾನಿ ಮಾಡಿದ್ದು ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಖಿಲ್ ಕಲ್ಲಾರೆ ಪೊಲೀಸರಿಗೆ ಮನವಿ ನೀಡಿದ್ದಾರೆ.

ಆ ಭಾಗದಲ್ಲಿ ಬಹು ವರ್ಷಗಳಿಂದ ರಸ್ತೆ ಬೇಡಿಕೆ ಇತ್ತು. ಇಷ್ಟು ವರ್ಷ ಯಾರಿಂದಲೂ ಆ ಭಾಗದ ರಸ್ತೆ ಬೇಡಿಕೆಯನ್ನು ಈಡೇರಿಸಲು ಸಾಧ್ಯವಾಗಿರಲಿಲ್ಲ. ಶಾಸಕರು ಮುತುವರ್ಜಿ ವಹಿಸಿ ಸ್ಥಳೀಯರ ಜೊತೆ ಮಾತುಕತೆ ನಡೆಸಿ ರಸ್ತೆ ನಿರ್ಮಾಣಕ್ಕೆ ಸಹಕಾರ ನೀಡಿದ್ದು ಮಾತ್ರವಲ್ಲದೆ ರಸ್ತೆ ಕಾಮಗಾರಿಗೆ ತಕ್ಷಣಕ್ಕೆ 5 ಲಕ್ಷ ರೂ ಅನುದಾನವನ್ನು ಒದಗಿಸಿದ್ದಾರೆ. ಇದಕ್ಕಾಗಿ ಆ ಪ್ರದೇಶದಲ್ಲಿ ಶಾಸಕರಿಗೆ ಅಭಿನಂದನೆ ಸಲ್ಲಿಸಿ ಹಾಕಲಾಗಿದ್ದ ಬ್ಯಾನರನ್ನು ಹರಿದು ಹಾಕಿದ್ದಾರೆ. ಕೃತ್ಯ ಎಸಗಿದ ವಿಘ್ನ ಸಂತೋಷಿಗಳನ್ನು ತಕ್ಷಣ ಬಂಧಿಸಬೇಕು ಇಲ್ಲವಾದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಅಖಿಲ್ ಕಲ್ಲಾರೆ ತಿಳಿಸಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ರಾಕೇಶ್ ಬಡಗನ್ನೂರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!